ಅಂಪೈರ್ ನಿರ್ಣಯಕ್ಕೆ ಅಗೌರವ ತೋರಿದ ಜೇಸನ್ ರಾಯ್ ಗೆ ದಂಡ

ಔಟ್ ತೀರ್ಪು ನೀಡಿದರೂ ಮೈದಾನ ಬಿಟ್ಟು ಕದಲದ ರಾಯ್

Team Udayavani, Jul 12, 2019, 11:45 AM IST

roy

ಬರ್ಮಿಗಂ: ಇಂಗ್ಲೆಂಡಿನ ಆರಂಭಿಕ ಆಟಗಾರ ಜೇಸನ್ ರಾಯ್ ಅಸೀಸ್ ವಿರುದ್ಧದ ಪಂದ್ಯದಲ್ಲಿ ಅಂಪೈರ್ ನಿರ್ಣಯಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಐಸಿಸಿ ಪಂದ್ಯ ಶುಲ್ಕದ 30 ಶೇಕಡಾ ದಂಡ ವಿಧಿಸಲಾಗಿದೆ.

ಆಸಿಸ್ ವಿರುದ್ದದ ಸೆಮಿ ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಡುತ್ತಿದ್ದ ರಾಯ್ ಕೆಟ್ಟ ಅಂಪೈರ್ ತೀರ್ಪಿಗೆ ಬಲಿಯಾಗಬೇಕಾಯಿತು. ಪ್ಯಾಟ್ ಕಮಿನ್ಸ್ ರ ಪಂದ್ಯದ 20 ನೇ ಓವರ್ ವೇಳೆ ಈ ಘಟನೆ ನಡೆದಿತ್ತು. ಕಮಿನ್ಸ್ ಎಸೆದ ಬಾಲ್ ಆನ್ ಸೈಡ್ ಮೂಲಕ ಕೀಪರ್ ಕೈ ಸೇರಿತು. ಹೊಡೆತಕ್ಕಾಗಿ ರಾಯ್ ಬ್ಯಾಟ್ ಬೀಸಿದ್ದರು ಕೂಡಾ. ಆಸೀಸ್ ಬೌಲರ್, ಕೀಪರ್ ಸೇರಿ ಕ್ಯಾಚ್ ಗೆ ಮನವಿ ಮಾಡಿದರು. ಅಂಪೈರ್ ಕುಮಾರ ಧರ್ಮಸೇನ ಔಟ್ ಎಂದು ಘೋಷಿಸಿದರು.

ಆದರೆ ರಾಯ್ ಗೆ ಧರ್ಮಸೇನಾ ತೀರ್ಪು ಸಮಾಧಾನ ತಂದಿರಲಿಲ್ಲ. ಯಾಕೆಂದರೆ ರಾಯ್ ಬ್ಯಾಟ್ ಅಥವಾ ಗ್ಲೌಸ್ ಗೆ ಚೆಂಡು ತಾಗಿರಲಿಲ್ಲ. ಅಲ್ಟ್ರಾ ಎಡ್ಜ್ ಕೂಡಾ ಇದನ್ನೆ ಅನುಮೋಧಿಸಿತ್ತು. ಆದರೆ ಇಂಗ್ಲೆಂಡ್ ಬಳಿ ತೀರ್ಪು ಮರು ಪರಿಶೀಲಿಸುವ ಅವಕಾಶ ಇಂಗ್ಲೆಂಡ್ ಅದಾಗಲೇ ಕಳೆದುಕೊಂಡಿತ್ತು. ಇದರಿಂದ ಅಸಮಧಾನಗೊಂಡ ರಾಯ್ ಮೈದಾನ ಬಿಟ್ಟು ಕದಲಲಿಲ್ಲ. ಕೊನೆಗೆ ಅಂಪೈರ್ ಮನವೊಲಿಸಿ ರಾಯ್ ಅವರನ್ನು ಹೊರಗೆ ಕಳುಹಿಸಿದರು.

ಈ ವೇಳೆಗೆ ಜೇಸನ್ ರಾಯ್ 85 ರನ್ ಗಳಿಸಿದ್ದರು. ಸೆಮಿ ಫೈನಲ್ ಪಂದ್ಯದಲ್ಲಿ ಶತಕ ಗಳಿಸುವ ಉತ್ತಮ ಅವಕಾಶವೊಂದನ್ನು ರಾಯ್ ತಪ್ಪಿಸಿಕೊಂಡರು.

ಮೈದಾನದಲ್ಲಿ ರಾಯ್ ಈ ವರ್ತನೆಗೆ ಐಸಿಸಿ ದಂಡ ವಿಧಿಸಿದ್ದು, ಪಂದ್ಯ ಶುಲ್ಕದ ಶೇ 30ರಷ್ಟನ್ನು ರಾಯ್ ಗೆ ದಂಡ ವಿಧಿಸಲಾಗಿದೆ.

ಅಸೀಸ್ ವಿರುದ್ಧ ಇಂಗ್ಲೆಂಡ್ ಎಂಟು ವಿಕೆಟ್ ಗಳ ಜಯ ಸಾಧಿಸಿ ಫೈನಲ್ ತಲುಪಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಆಸೀಸ್ 49 ಓವರ್ ಗಳಲ್ಲಿ 223 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದು ಕೊಂಡಿತ್ತು. ಇದನ್ನು ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 32.1 ಓವರ್ ನಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತ್ತು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.