ಇಂಗ್ಲೆಂಡ್‌ ಅಂಪಾಯರ್‌ ಇಯಾನ್‌ ಗೂಲ್ಡ್‌ ಗುಡ್‌ಬೈ

ಭಾರತ-ಶ್ರೀಲಂಕಾ ಪಂದ್ಯವೇ ಕೊನೆಯದು

Team Udayavani, Jul 7, 2019, 5:49 AM IST

umpire

ಲಂಡನ್‌: ವಿಶ್ವಕಪ್‌ ಕ್ರಿಕೆಟ್‌ ಎನ್ನುವುದು ಅನೇಕ ಹಿರಿಯ ಕ್ರಿಕೆಟಿಗರ ಪಾಲಿಗೆ ವಿದಾಯ ಕೂಟವಾಗುವುದು ವಿಶೇಷವೇನಲ್ಲ. ಈ ಸಾಲಿನಲ್ಲಿ ಅಂಪಾಯರ್‌ ಕೂಡ ಕಾಣಿಸಿಕೊಳ್ಳುತ್ತಿರುವುದು ತುಸು ಅಚ್ಚರಿಯೆನಿಸಿದೆ. ಹೀಗೆ ವಿದಾಯ ಹೇಳುವ ಅಂಪಾಯರ್‌ ಆತಿಥೇಯ ಇಂಗ್ಲೆಂಡಿನ ಇಯಾನ್‌ ಗೂಲ್ಡ್‌.

ಭಾರತ-ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಅಂಪಾಯರ್‌ ಆಗಿ ಸೇವೆ ಸಲ್ಲಿಸಿದ 61ರ ಹರೆಯದ ಇಯಾನ್‌ ಗೂಲ್ಡ್‌ ಪಾಲಿಗೆ ಇದೇ ಕೊನೆಯ ಅಂತಾರಾಷ್ಟ್ರೀಯ ಪಂದ್ಯವೆಂದೂ, ಈ ಮುಖಾಮುಖೀ ಮುಗಿದೊಡನೆ ಅವರು ತಮ್ಮ ಅಂಪಾಯರಿಂಗ್‌ ಬಾಳ್ವೆಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ತಿಳಿಸಿದೆ.

ಇಯಾನ್‌ ಗೂಲ್ಡ್‌ 74 ಟೆಸ್ಟ್‌ಗಳಲ್ಲಿ ಅಂಪಾಯರಿಂಗ್‌ ಸೇವೆ ಸಲ್ಲಿಸಿದ್ದಾರೆ. ಭಾರತ-ಶ್ರೀಲಂಕಾ ನಡುವಿನ ಮುಖಾಮುಖೀ ಅವರ 140ನೇ ಏಕದಿನ ಪಂದ್ಯವಾಗಿದೆ.

ಇದು ಇಯಾನ್‌ ಗೂಲ್ಡ್‌ ಕರ್ತವ್ಯ ನಿಭಾಯಿಸಿದ 4ನೇ ಐಸಿಸಿ ವಿಶ್ವಕಪ್‌ ಪಂದ್ಯಾವಳಿ. ಮೊಹಾಲಿಯಲ್ಲಿ ನಡೆದ 2011ರ ಭಾರತ-ಪಾಕಿಸ್ಥಾನ ನಡುವಿನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಕರ್ತವ್ಯ ನಿಭಾಯಿಸಿದ ಹೆಗ್ಗಳಿಕೆ ಇವರದ್ದಾಗಿದೆ.

ಮೊದಲು ವಿಕೆಟ್‌ ಕೀಪರ್‌
ಯಶಸ್ವಿ ವಿಕೆಟ್‌ ಕೀಪರ್‌ ಆಗಿದ್ದ ಇಯಾನ್‌ ಗೂಲ್ಡ್‌ 1983ರ ವಿಶ್ವಕಪ್‌ ವೇಳೆ ಇಂಗ್ಲೆಂಡ್‌ ತಂಡದಲ್ಲಿದ್ದರು. ಒಟ್ಟು18 ಏಕದಿನ ಪಂದ್ಯಗಳನ್ನಾಡಿದ್ದಾರೆ. ಆಬಳಿಕ ಮಿಡ್ಲ್ ಸೆಕ್ಸ್‌ ಕೌಂಟಿಗೆ ಕೋಚ್‌ ಆಗಿ ದುಡಿದರು.

ಕೀಪರ್‌ ಹಾಗೂ ಕೋಚಿಂಗ್‌ಗಿಂತಲೂ ಮಿಗಿಲಾಗಿ ಅಂಪಾಯರ್‌ ಆಗಿದ್ದ ವೇಳೆ ಗೂಲ್ಡ್‌ ಹೆಚ್ಚು ಜನಪ್ರಿಯರಾಗಿದ್ದರು. 13 ವರ್ಷಗಳ ಹಿಂದೆ ಇಂಗ್ಲೆಂಡ್‌-ಶ್ರೀಲಂಕಾ ನಡುವಿನ ಟಿ20 ಪಂದ್ಯದಲ್ಲಿ ಅಂಪಾಯರ್‌ ಆಗಿ ಪದಾರ್ಪಣೆ ಮಾಡಿದ್ದರು. ಐದೇ ದಿನಗಳ ಬಳಿಕ ಈ ಎರಡು ತಂಡಗಳ ನಡುವಿನ ಏಕದಿನ ಪಂದ್ಯದಲ್ಲೂ ಅಂಪಾಯರ್‌ ಆಗಿ ಕರ್ತವ್ಯ ಆರಂಭಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.