ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಇಮ್ರಾನ್ ತಾಹೀರ್

ಆಸೀಸ್ ವಿರುದ್ಧ ಕೊನೆಯ ಪಂದ್ಯವಾಡಲಿರುವ ಸ್ಪಿನ್ ಲೆಜೆಂಡ್

Team Udayavani, Jul 6, 2019, 5:22 PM IST

tahir

ಲಂಡನ್: ವಿಕೆಟ್ ಕಿತ್ತ ಕೂಡಲೇ ಎರಡೂ ಕೈಯಗಲಿಸಿ ಮೈದಾನದ ಮೂಲೆ ಮೂಲೆ ಓಡುತ್ತಿದ್ದ ಸ್ಪಿನ್ನರ್ ಇಮ್ರಾನ್ ತಾಹೀರ್ ಇನ್ನು ಮುಂದೆ ಏಕದಿನ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಶನಿವಾರ ಆಸೀಸ್ ವಿರುದ್ಧದ ಪಂದ್ಯವೇ ತಾಹೀರ್ ಅಂತಿಮ ಅಂತಾರಾಷ್ಟ್ರೀಯ ಏಕದಿನ ಪಂದ್ಯ.

ಇಲ್ಲಿಯವರೆಗೆ 105 ಏಕದಿನ ಪಂದ್ಯಗಳನ್ನಾಡಿರುವ ಇಮ್ರಾನ್ 172 ವಿಕೆಟ್ ಪಡೆದಿದ್ದಾರೆ. 45 ರನ್ ನೀಡಿ ಏಳು ವಿಕೆಟ್ ಪಡೆದಿರುವುದು ತಾಹೀರ್ ಜೀವನಶ್ರೇಷ್ಠ ಬೌಲಿಂಗ್.

1979ರಲ್ಲಿ ಪಾಕಿಸ್ಥಾನದ ಲಾಹೋರ್ ನಲ್ಲಿ ಜನಿಸಿದ್ದ ಮೊಹಮ್ಮದ್ ಇಮ್ರಾನ್ ತಾಹೀರ್, ಅಂಡರ್ 19 ಮತ್ತು ದೇಶೀಯ ಕ್ರಿಕೆಟ್ ಕೂಟಗಳಲ್ಲಿ ಪಾಕಿಸ್ಥಾನವನ್ನು ಪ್ರತಿನಿಧಿಸಿದ್ದರು. 2006ರಲ್ಲಿ ದಕ್ಷಿಣಾ ಆಫ್ರಿಕಾ ಮೂಲದ ಯುವತಿಯನ್ನು ಮದುವೆಯಾದ ನಂತರ ತಾಹೀರ್ ದಕ್ಷಿಣ ಆಫ್ರಿಕಾದ ಸದಸ್ಯತ್ವ ಪಡೆದರು.

2011ರ ವಿಶ್ವಕಪ್ ನಲ್ಲಿ ದ. ಆಫ್ರಿಕಾ ರಾಷ್ಟ್ರೀಯ ತಂಡವನ್ನು ಸೇರಿದ ಇಮ್ರಾನ್ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ತನ್ನ 32ನೇ ವರ್ಷಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಸೇರಿದ ತಾಹೀರ್ ಆಡಿದ ಕೆಲವೇ ವರ್ಷಗಳಲ್ಲಿ ದೇಶ ವಿದೇಶಗಳಲ್ಲಿ ಮಿಂಚು ಹರಿಸಿದ್ದಾರೆ. 2011ರ ವಿಶ್ವಕಪ್ ನಲ್ಲಿ ಆಡಿದ ಐದು ಪಂದ್ಯದಲ್ಲಿ 14 ವಿಕೆಟ್ ಪಡೆದ ಇಮ್ರಾನ್, ದ.ಆಫ್ರಿಕಾ ಕ್ರಿಕೆಟ್ ನ ಸ್ಪಿನ್ ಗೆ ಹೊಸ ಭಾಷ್ಯ ಬರೆದರು.


40 ವರ್ಷದ ಇಮ್ರಾನ್ ತಾಹೀರ್, 2019ರ ವಿಶ್ವಕಪ್ ಆಡುತ್ತಿರುವ ಅತೀ ಹಿರಿಯ ಆಟಗಾರ. ಸೆಮಿ ಫೈನಲ್ ತಲುಪಲು ವಿಫಲವಾಗಿರುವ ದಕ್ಷಿಣ ಆಫ್ರಿಕಾ ಶನಿವಾರ ಆಸೀಸ್ ವಿರುದ್ದ ಕೊನೆಯ ಲೀಗ್ ಪಂದ್ಯವಾಡಲಿದೆ. ಇದೇ ಪಂದ್ಯ ಇಮ್ರಾನ್ ತಾಹೀರ್ ಗೆ ಅಂತಿಮ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಲಿದೆ.

ಏಕದಿನ ಕ್ರಿಕೆಟ್ ನಲ್ಲಿ ತಾಹೀರ್ ದಾಖಲೆಗಳು
* ದಕ್ಷಿಣ ಆಫ್ರಿಕಾ ಪರ ವಿಶ್ವಕಪ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ತಾಹೀರ್ ಬಳಿಯಿದೆ (39)
* ಏಕದಿನ ಕ್ರಿಕೆಟ್ ನಲ್ಲಿ ಏಳು ವಿಕೆಟ್ ಪಡೆದ ಮೊದಲ ದಕ್ಷಿಣ ಆಫ್ರಿಕಾದ ಬೌಲರ್.
* ದ. ಆಫ್ರಿಕಾ ಪರ ಅತೀ ಕಡಿಮೆ (58) ಏಕದಿನ ಪಂದ್ಯಗಳಲ್ಲಿ 100 ವಿಕೆಟ್ ಪಡೆದ ಬೌಲರ್.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.