ಇಂದು ಟೀಮ್‌ ಇಂಡಿಯಾ ರಂಗಪ್ರವೇಶ


Team Udayavani, Jun 5, 2019, 6:10 AM IST

india

ಸೌತಾಂಪ್ಟನ್‌: ಭಾರತೀಯ ಕ್ರಿಕೆಟ್‌ ಅಭಿಮಾನಿಗಳ ಸುದೀರ್ಘ‌ ಕಾಯುವಿಕೆ ಕೊನೆಗೊಳ್ಳುವ ಕ್ಷಣ ಸಮೀಪಿಸಿದೆ. ವಿರಾಟ್‌ ಕೊಹ್ಲಿ ಸಾರಥ್ಯದ ಭಾರತ 12ನೇ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಬುಧವಾರ ಸೌತಾಂಪ್ಟನ್‌ ಅಂಗಳದಲ್ಲಿ ರಂಗಪ್ರವೇಶ ಮಾಡಲಿದೆ. ಟೀಮ್‌ ಇಂಡಿಯಾ ಮೇಲೆ ಕೋಟ್ಯಂತರ ಮಂದಿ ಇರಿಸಿದ ನಂಬಿಕೆ, ನಿರೀಕ್ಷೆಗಳೆಲ್ಲ ತಾರಕಕ್ಕೇರುವ ಗಳಿಗೆ ಇದಾಗಿದೆ.

ಮೊದಲೆರಡೂ ಪಂದ್ಯಗಳನ್ನು ಸೋತು ತೀವ್ರ ಒತ್ತಡ ಹಾಗೂ ಸಂಕಟದಲ್ಲಿರುವ ದಕ್ಷಿಣ ಆಫ್ರಿಕಾ ಭಾರತದ ಮೊದಲ ಎದುರಾಳಿ. ಕೊಹ್ಲಿ ಬಳಗ ಹರಿಣಗಳ ಸಂಕಟದ ಲಾಭವನ್ನೆತ್ತಿ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆದೀತೇ ಅಥವಾ ಅವಳಿ ಸೋಲುಗಳ ಸೇಡನ್ನು ಹರಿಣಗಳ ಪಡೆ ಭಾರತದ ಮೇಲೆ ತೀರಿಸಿಕೊಂಡೀತೇ ಎಂಬುದು ಈ ಪಂದ್ಯದ ಕುತೂಹಲ.

ಭಾರತಕ್ಕೆ ಮೊದಲ, ಆಫ್ರಿಕಾಕ್ಕೆ 3ನೇ ಪಂದ್ಯ!
ಈ ಪಂದ್ಯಾವಳಿಯಲ್ಲಿ ಭಾರತ ಕೊನೆಯ ತಂಡವಾಗಿ ಆಡಲಿಳಿಯಲಿದೆ. ಈಗಾಗಲೇ ವಿಶ್ವಕಪ್‌ ಆರಂಭವಾಗಿ 6 ದಿನಗಳೇ ಮುಗಿದಿವೆ. ಎಲ್ಲ ತಂಡಗಳು ಒಂದು-ಎರಡು ಪಂದ್ಯಗಳನ್ನಾಡಿ ಮುಗಿಸಿರುವ ಹೊತ್ತಿಗೆ ಭಾರತ ತನ್ನ ಮೊದಲ ಪಂದ್ಯ ಆಡುತ್ತಿದೆ. ಇದಕ್ಕಿಂತ ಮಿಗಿಲಾದ ಅಚ್ಚರಿಯೆಂದರೆ, ಎದುರಾಳಿ ದಕ್ಷಿಣ ಆಫ್ರಿಕಾ ಪಾಲಿಗೆ ಇದು 3ನೇ ಪಂದ್ಯ ಎಂಬುದು!

ಮೊದಲ ಸಲ ಕೊಹ್ಲಿ ಸಾರಥ್ಯ
ಭಾರತ ಇದೇ ಮೊದಲ ಸಲ ವಿರಾಟ್‌ ಕೊಹ್ಲಿ ಸಾರಥ್ಯದಲ್ಲಿ ವಿಶ್ವಕಪ್‌ ಆಡಲಿಳಿಯುತ್ತಿದೆ. 2011ರಲ್ಲಿ ತಂಡದ ಸಾಮಾನ್ಯ ಆಟಗಾರನಾಗಿದ್ದ ಕೊಹ್ಲಿ, ಕಳೆದ ಸಲ ಉಪನಾಯಕರಾಗಿದ್ದರು. ಭಾರತಕ್ಕೆ ಕಿರಿಯರ ವಿಶ್ವಕಪ್‌ ತಂದಿತ್ತ ಕಪ್ತಾನನೆಂಬ ಹೆಗ್ಗಳಿಕೆಯುಳ್ಳ ಕೊಹ್ಲಿ ಸೀನಿಯರ್‌ ವಿಶ್ವಕಪ್‌ನಲ್ಲೂ ಇದನ್ನು ಪುನರಾವರ್ತಿಸಬಲ್ಲರೇ ಎಂಬ ಕುತೂಹಲ ಸಹಜ.

ಮಧ್ಯಮ ಕ್ರಮಾಂಕದಲ್ಲಿ ಅಷ್ಟೇನೂ ಬಲಿಷ್ಠವಲ್ಲ ಎಂಬುದನ್ನು ಹೊರತುಪಡಿಸಿದರೆ ಉಳಿದಂತೆ ಭಾರತ ತಂಡ ಸಶಕ್ತವಾಗಿಯೇ ಇದೆ. ಅಗ್ರ ಕ್ರಮಾಂಕದಲ್ಲಿ ರೋಹಿತ್‌, ಧವನ್‌, ಕೊಹ್ಲಿ; ಕೆಳ ಸರದಿಯಲ್ಲಿ ಧೋನಿ, ಪಾಂಡ್ಯ ತಂಡದ ನೆರವಿಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕೇದಾರ್‌ ಜಾಧವ್‌ ಇನ್ನೂ ಚೇತರಿಸದ ಕಾರಣ ಕೆ.ಎಲ್‌. ರಾಹುಲ್‌ಗೆ ಬಾಗಿಲು ತೆರೆಯುವುದು ಬಹುತೇಕ ಖಚಿತ. ಬಾಂಗ್ಲಾ ಎದುರಿನ ಅಭ್ಯಾಸ ಪಂದ್ಯದಲ್ಲಿ ರಾಹುಲ್‌ ಜತೆಗೆ ಧೋನಿ ಕೂಡ ಶತಕ ಬಾರಿಸಿ ಮೆರೆದಿದ್ದಾರೆ.

ಆಲ್‌ರೌಂಡರ್‌ ವಿಭಾಗದಲ್ಲಿ ಹಾರ್ದಿಕ್‌ ಪಾಂಡ್ಯ ಮೇಲೆ ಭಾರೀ ನಿರೀಕ್ಷೆ ಇಡಲಾಗಿದೆ. ಜತೆಗೆ ರವೀಂದ್ರ ಜಡೇಜ ಕೂಡ ರೇಸ್‌ನಲ್ಲಿದ್ದಾರೆ. ವೇಗದ ಬೌಲಿಂಗ್‌ ವಿಭಾಗ ಬುಮ್ರಾ, ಶಮಿ, ಭುವನೇಶ್ವರ್‌ ಅವರಿಂದ ಹೆಚ್ಚು ವೈವಿಧ್ಯಮಯವಾಗಿದೆ. ಸ್ಪಿನ್‌ ವಿಭಾಗದಲ್ಲಿ ಕುಲದೀಪ್‌, ಚಾಹಲ್‌ ಭಾರತದ ಪ್ರಧಾನ ಅಸ್ತ್ರವಾಗಿದ್ದಾರೆ.

ಸಂಭಾವ್ಯ ತಂಡಗಳು
ದಕ್ಷಿಣ ಆಫ್ರಿಕಾ: ಕ್ವಿಂಟನ್‌ ಡಿ ಕಾಕ್‌, ಐಡನ್‌ ಮಾರ್ಕ್‌ರಮ್‌, ಫಾ ಡು ಪ್ಲೆಸಿಸ್‌, ಡೇವಿಡ್‌ ಮಿಲ್ಲರ್‌, ರಸ್ಸಿ ವಾನ್‌ ಡರ್‌ ಡುಸೆನ್‌, ಜೀನ್‌ಪಾಲ್‌ ಡ್ಯುಮಿನಿ, ಆ್ಯಂಡಿಲ್‌ ಫೆಲುಕ್ವಾಯೊ, ಕ್ರಿಸ್‌ ಮಾರಿಸ್‌/ಹಾಶಿಮ್‌ ಆಮ್ಲ, ಕಾಗಿಸೊ ರಬಾಡ, ಇಮ್ರಾನ್‌ ತಾಹಿರ್‌.

ಭಾರತ: ರೋಹಿತ್‌ ಶರ್ಮ, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ (ನಾಯಕ), ಕೆ.ಎಲ್‌. ರಾಹುಲ್‌, ಕೇದಾರ್‌ ಜಾಧವ್‌, ಮಹೇಂದ್ರ ಸಿಂಗ್‌ ಧೋನಿ, ಹಾರ್ದಿಕ್‌ ಪಾಂಡ್ಯ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ, ಯಜುವೇಂದ್ರ ಚಾಹಲ್‌.

ರಬಾಡ ಅಪಾಯ
ದಕ್ಷಿಣ ಆಫ್ರಿಕಾವು ಕಳಪೆ ಫಾರ್ಮ್ ಮತ್ತು ಗಾಯದ ಸಮಸ್ಯೆಯಿಂದ ಬಳಲುತ್ತಿರಬಹುದು. ಆದರೆ ಕಾಗಿಸೊ ರಬಾಡ ಅವರ ಒಂದು ಅಪಾಯಕಾರಿ ದಾಳಿಯಿಂದ ತಂಡ ಮೇಲುಗೈ ಸಾಧಿಸಲೂಬಹುದು. ತನ್ನ ತೀಕ್ಷ್ಣವಾದ ವೇಗ ಮತ್ತು ಸಾಮರ್ಥ್ಯದಿಂದ ರಬಾಡ ಭಾರತಕ್ಕೆ ಕಂಟಕವಾಗುವ ಸಾಧ್ಯತೆಯಿದೆ. ಆರಂಭಿಕರಾದ ರೋಹಿತ್‌, ಧವನ್‌ ಅವರನ್ನು ಬೇಗನೇ ಔಟ್‌ ಮಾಡಿದರೆ ಭಾರತ ಒತ್ತಡಕ್ಕೆ ಬೀಳಬಹುದು. ಲೆಗ್‌ ಸ್ಪಿನ್‌ ದಾಳಿಯನ್ನು ಎದುರಿಸಲು ರೋಹಿತ್‌ ಒದ್ದಾಡುತ್ತಾರೆ. ಹೀಗಾಗಿ ಹೊಸ ಚೆಂಡನ್ನು ತಾಹಿರ್‌ಗೆ ನೀಡಬಹುದು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.