ವಾಶೌಟ್‌ ನಂ. 4; ಮಳೆಯಾಟಕ್ಕೆ ಸೋತ ಭಾರತ-ನ್ಯೂಜಿಲ್ಯಾಂಡ್‌


Team Udayavani, Jun 14, 2019, 5:00 AM IST

AP6_13_2019_000149B

ನಾಟಿಂಗ್‌ಹ್ಯಾಮ್‌: ವಿಶ್ವಕಪ್‌ನಲ್ಲಿ ಮಳೆಯ ಪ್ರಾಬಲ್ಯ ಮುಂದುವರಿದಿದೆ. ಅಭಿಮಾನಿಗಳ ತೀವ್ರ ಹತಾಶೆಯ ನಡುವೆ ಕೂಟದ ಅಷ್ಟೂ ಆಸಕ್ತಿ ನಿಧಾನವಾಗಿ ಕಡಿಮೆ ಆಗುತ್ತ ಹೋಗುತ್ತಿದೆ. ಮಳೆಯಾಟದ ತಾಜಾ ಉದಾಹರಣೆ ಗುರುವಾರ ನಾಟಿಂಗ್‌ಹ್ಯಾಮ್‌ನಲ್ಲಿ ಕಾಣಸಿಕ್ಕಿದ್ದು, ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಬಹು ನಿರೀಕ್ಷೆಯ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

ಇದು ಪ್ರಸಕ್ತ ವಿಶ್ವಕಪ್‌ನಲ್ಲಿ ಮಳೆ ನುಂಗಿಹಾಕಿದ 4ನೇ ಪಂದ್ಯ. ಇದರೊಂದಿಗೆ ವಿಶ್ವಕಪ್‌ನಲ್ಲಿ ಮಳೆಯಾಟದ ದಾಖಲೆಯೂ ವಿಸ್ತಾರಗೊಂಡಿದೆ. ಇದು ಒಂದೂ ಎಸೆತ ಕಾಣದೆ ರದ್ದುಗೊಂಡ ವಿಶ್ವಕಪ್‌ ಇತಿಹಾಸದ 5ನೇ ಪಂದ್ಯ. ಕೇವಲ ಅಂಕಗಳನ್ನು ಹಂಚಿಕೊಳ್ಳುತ್ತ ಹೋಗುವುದರಲ್ಲಿ ಅದೇನು ಲಾಭವಿದೆ ಎಂಬ ಕ್ರಿಕೆಟ್‌ ಪ್ರೇಮಿಗಳ ಕೂಗು ಕೂಡ ಮಳೆಯ ಅಬ್ಬರದಲ್ಲಿ ಕೊಚ್ಚಿ ಹೋಗಲಾರಂಭಿಸಿದೆ.

ಅಜೇಯ ತಂಡಗಳಿಗೆ ನಿರಾಸೆ
ಭಾರತ ಮತ್ತು ನ್ಯೂಜಿಲ್ಯಾಂಡ್‌ ಈ ಕೂಟದ ಅಜೇಯ ತಂಡಗಳಾಗಿದ್ದವು. ಹೀಗಾಗಿ ಗೆಲುವಿನ ಓಟ ಮುಂದುವರಿಸಿಕೊಂಡು ಹೋಗುವ ಅದೃಷ್ಟ ಯಾರಿಗಿದೆ ಎಂಬುದು ಎಲ್ಲರನ್ನೂ ಕಾಡುತ್ತಿದ್ದ ಕುತೂಹಲವಾಗಿತ್ತು. ಈವರೆಗೆ ಏಶ್ಯನ್‌ ತಂಡಗಳನ್ನೇ ಎದುರಿಸಿದ ನ್ಯೂಜಿಲ್ಯಾಂಡ್‌ ಎಲ್ಲ 3 ಪಂದ್ಯಗಳನ್ನು ಗೆದ್ದು ಹ್ಯಾಟ್ರಿಕ್‌ ಸಾಧಿಸಿದರೆ, ಭಾರತ ಆಡಿದ ಎರಡರಲ್ಲೂ ಗೆಲುವಿನ ಸಂಭ್ರಮ ಆಚರಿಸಿತ್ತು. ಆದರೆ ಎರಡೂ ತಂಡಗಳು ಮೊದಲ ಸಲ ಮಳೆಯಾಟಕ್ಕೆ ಶರಣಾಗಲೇ ಬೇಕಾಯಿತು.
ನಾಟಿಂಗ್‌ಹ್ಯಾಮ್‌ನಲ್ಲಿ ಅಪರಾಹ್ನದ ಬಳಿಕ ಬಿರುಸಿನ ಮಳೆಯಾಗಲಿದೆ ಎಂಬುದು ಹವಾಮಾನ ವರದಿಯಾಗಿತ್ತು. ಹೀಗಾಗಿ ಒಂದು ಇನ್ನಿಂಗ್ಸ್‌ ಯಾವುದೇ ಅಡ್ಡಿಯಿಲ್ಲದೆ ಮುಗಿದೀತು ಎಂಬ ನಿರೀಕ್ಷೆ ಇತ್ತು. ಆದರೆ ಮುಂಜಾನೆಯಿಂದಲೇ ಸುರಿಯತೊಡಗಿದ ಮಳೆ ಇಡೀ ಪಂದ್ಯವನ್ನು ನುಂಗಿ ಬಿಟ್ಟಿತು.

ರದ್ದುಗೊಂಡ ಪಂದ್ಯಗಳು
1.ಪಾಕಿಸ್ಥಾನ-ಶ್ರೀಲಂಕಾ,
ಬ್ರಿಸ್ಟಲ್‌, ಜೂ. 7
2.ದಕ್ಷಿಣ ಆಫ್ರಿಕಾ-ವಿಂಡೀಸ್‌, ಸೌತಾಂಪ್ಟನ್‌, ಜೂ. 10
3.ಶ್ರೀಲಂಕಾ-ಬಾಂಗ್ಲಾದೇಶ, ಬ್ರಿಸ್ಟಲ್‌, ಜೂ. 11
4. ಭಾರತ-ನ್ಯೂಜಿಲ್ಯಾಂಡ್‌, ನಾಟಿಂಗ್‌ಹ್ಯಾಮ್‌, ಜೂ. 13

ಭಾರತ-ಪಾಕ್‌ ಪಂದ್ಯಕ್ಕೂ ಮಳೆ?
ರವಿವಾರ ಮ್ಯಾಂಚೆಸ್ಟರ್‌ನಲ್ಲಿ ಭಾರತ-ಪಾಕಿಸ್ಥಾನ ನಡುವೆ ಕೂಟದ ಹೈ ವೋಲ್ಟೆàಜ್‌ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೂ ಮಳೆ ಭೀತಿ ಎದುರಾಗುವ ಸಂಭವವಿದೆ. ಇನ್ನೆರಡು ದಿನಗಳಲ್ಲಿ ಖಚಿತ ಹವಾಮಾನ ವರದಿ ಲಭ್ಯವಾಗಲಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.