ನೆರವು ನೀಡಲು ಜಯವರ್ಧನೆ ತಿರಸ್ಕಾರ

ಲಂಕಾ ವಿಶ್ವಕಪ್‌ ಅಭಿಯಾನ

Team Udayavani, May 28, 2019, 6:00 AM IST

Jayawardene

ಕೊಲಂಬೊ: ಒಂದು ಕಾಲದಲ್ಲಿ ವಿಶ್ವ ಕ್ರಿಕೆಟಿನ ಶ್ರೇಷ್ಠ ತಂಡಗಳಲ್ಲೊಂದಾಗಿ ಮೆರೆದಾಡುತ್ತಿದ್ದ ಶ್ರೀಲಂಕಾ ಈಗ ತೀರಾ ದುರ್ಬಲವಾಗಿದೆ. ಈ ಬಾರಿ ವಿಶ್ವಕಪ್‌ನಲ್ಲಿ ಅದು ಲೀಗ್‌ ಹಂತದಲ್ಲಿ ಸಾಮಾನ್ಯ ತಂಡಗಳ ವಿರುದ್ಧವೇ ಗೆಲ್ಲುವುದು ಕಷ್ಟ ಎಂಬ ಪರಿಸ್ಥಿತಿಯಿದೆ.

ಹೀಗಾಗಿ ಲಂಕಾ ವಿಶ್ವಕಪ್‌ ಹೋರಾಟಕ್ಕೆ ನೆರವಾಗಿ ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ, ಮಾಜಿ ನಾಯಕ ಮಾಹೇಲ ಜಯವರ್ಧನೆ ಅವರಲ್ಲಿ ಕೇಳಿಕೊಂಡಿದೆ. ಆದರೆ ಅವರು ಇದನ್ನು ಖಡಾಖಂಡಿತವಾಗಿ ತಿರಸ್ಕರಿಸಿದ್ದಾರೆ.

ವ್ಯವಸ್ಥೆ ವಿರುದ್ಧ ಆಕ್ರೋಶ
ಕಳೆದ ವರ್ಷವೇ ಶ್ರೀಲಂಕಾದಲ್ಲಿನ ಕ್ರಿಕೆಟ್‌ ವ್ಯವಸ್ಥೆ ಸುಧಾರಣೆಗೆ ಕುಮಾರ ಸಂಗಕ್ಕರ, ಅರವಿಂದ ಡಿ ಸಿಲ್ವ, ಮಾಹೇಲ ಜಯವರ್ಧನೆ ಅವರಿದ್ದ ಸಮಿತಿ ಮಹತ್ವದ ಶಿಫಾರಸುಗಳನ್ನು ಮಾಡಿತ್ತು. ಅದನ್ನು ಲಂಕಾ ಕ್ರಿಕೆಟ್‌ ಮಂಡಳಿ ಸಂಪೂರ್ಣ ನಿರ್ಲಕ್ಷ್ಯ ಮಾಡಿತ್ತು. ಜಯವರ್ಧನೆಗೆ ಆ ಬೇಸರವೂ ಇದೆ. ಅದನ್ನು ಪರೋಕ್ಷವಾಗಿ ತಮ್ಮ ಮಾತುಗಳಲ್ಲಿ ತೋಡಿಕೊಂಡಿದ್ದಾರೆ.

ನನ್ನ ಪಾತ್ರವೇ ಗೊತ್ತಿಲ್ಲ!
“ಲಂಕಾ ಕ್ರಿಕೆಟ್‌ ಮಂಡಳಿ ಜವಾಬ್ದಾರಿ ಹೊತ್ತುಕೊಳ್ಳಿ ಎಂದು ಕರೆದಿದೆ. ಆದರೆ ಅಲ್ಲಿ ನನ್ನ ಪಾತ್ರವೇನು ಎಂಬುದೇ ಗೊತ್ತಿಲ್ಲ. ತಂತ್ರಗಾರಿಕೆ ದೃಷ್ಟಿಯಿಂದಾಗಲೀ, ಬೇರಾವುದೇ ದೃಷ್ಟಿಯಿಂದಾಗಲೀ ನನ್ನ ಅಭಿಪ್ರಾಯದ ಯಾವ ಅಗತ್ಯವೂ ಅಲ್ಲಿಲ್ಲ. ಈಗಾಗಲೇ ತಂಡ ಆಯ್ಕೆಯಾಗಿದೆ. ಎಲ್ಲವೂ ಮುಗಿದಿದೆ. ಈಗ ಅಲ್ಲಿ ನಾನು ಮಾಡುವ ಕೆಲಸ ಬಾಕಿಯಿಲ್ಲ. ಏನಾದರೊಂದನ್ನು ಸೇರಿಸುವ ಅಗತ್ಯವೂ ಕಾಣುತ್ತಿಲ್ಲ. ತಂಡದ ನಿರ್ವಹಣೆಯಲ್ಲಿ ಈಗಲೂ ಕಿರುಕಾಣಿಕೆ ನೀಡಲು ನನಗೆ ಸಂತೋಷವೇ ಇದೆ. ಆದರೆ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಜತೆ ನಾನು ಮಾಡುವ ಯಾವ ಕೆಲಸವೂ ಇಲ್ಲ’ ಎಂದು ಜಯವರ್ಧನೆ ಹೇಳಿದ್ದಾರೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.