ಮಾಯಾಂಕ್‌ ಅಗರ್ವಾಲ್ ಬದಲಿ ಆಟಗಾರ

ಬಿಸಿಸಿಐ ಪ್ರಕಟನೆ

Team Udayavani, Jul 2, 2019, 5:56 AM IST

Mayank-Agarwal

‘ವಿಜಯ್‌ ಶಂಕರ್‌ ಅವರ ಎಡಗಾಲಿನ ಹೆಬ್ಬೆರಳಿನ ಮೂಳೆಯಲ್ಲಿ ಸೂಕ್ಷ್ಮ ಬಿರುಕು ಕಂಡು ಬಂದಿದೆ. ಪೂರ್ತಿ ಗುಣಮುಖವಾಗಲು ಕನಿಷ್ಠ 3 ವಾರ ಬೇಕಿದೆ. ಹೀಗಾಗಿ ಅವರು ವಿಶ್ವಕಪ್‌ ಕೂಟದಿಂದ ಹೊರಬೀಳಲಿದ್ದಾರೆ. ಇವರ ಸ್ಥಾನಕ್ಕೆ ಮಾಯಾಂಕ್‌ ಅಗ ರ್ವಾಲ್ ಹೆಸರನ್ನು ಐಸಿಸಿಗೆ ಸೂಚಿಸಲಾಗಿದೆ’ ಎಂದು ಬಿಸಿಸಿಐ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

‘ಇದೊಂದು ಹಳೆಯ ಗಾಯ. ಸೌತಾಂಪ್ಟನ್‌ ಅಭ್ಯಾಸದ ವೇಳೆ ಬುಮ್ರಾ ಎಸೆತವೊಂದು ಅವರ ಕಾಲಿಗೆ ಬಡಿದಿತ್ತು. ಅಫ್ಘಾನ್‌ ಮತ್ತು ವಿಂಡೀಸ್‌ ವಿರುದ್ಧ ಆಡಿದ್ದರಿಂದ ಇದು ಬಿಗಡಾಯಿಸಿದೆ’ ಎಂಬುದಾಗಿ ರವಿವಾರದ ಪಂದ್ಯದ ಬಳಿಕ ರೋಹಿತ್‌ ಶರ್ಮ ಹೇಳಿದ್ದರು.

‘ಎ’ ತಂಡದ ಯಶಸ್ಸು
ಆರಂಭಕಾರ ಮಾಯಾಂಕ್‌ ಅಗ ರ್ವಾಲ್ ಕಳೆದ ವರ್ಷ ಆಸ್ಟ್ರೇಲಿಯ ವಿರುದ್ಧ ಟೆಸ್ಟ್‌ ಪದಾರ್ಪಣೆಗೈದು ಉತ್ತಮ ಪ್ರದರ್ಶನ ನೀಡಿದ್ದರು. ಈವರೆಗೆ ಏಕದಿನ ಪಂದ್ಯಗಳನ್ನಾಡಿಲ್ಲ. ಆದರೆ ರಾಹುಲ್ ದ್ರಾವಿಡ್‌ ಅವರಿಂದ ತರಬೇತು ಪಡೆದ ಭಾರತ ‘ಎ’ ತಂಡದ ಇಂಗ್ಲೆಂಡ್‌ ಪ್ರವಾಸದ ವೇಳೆ ಅಗರ್ವಾಲ್ ಉತ್ತಮ ಪ್ರದರ್ಶನ ನೀಡಿದ್ದರು.

ಇಂಗ್ಲೆಂಡ್‌ ಲಯನ್ಸ್‌ ಮತ್ತು ವೆಸ್ಟ್‌ ಇಂಡೀಸ್‌ ‘ಎ’ ತಂಡಗಳನ್ನು ಒಳಗೊಂಡ ಸರಣಿಯಲ್ಲಿ ಭಾರತ ‘ಎ’ ಚಾಂಪಿಯನ್‌ ಆಗಿ ಮೂಡಿಬಂದಿತ್ತು. ಮಾಯಾಂಕ್‌ ಅಗರ್ವಾಲ್ ಮತ್ತು ಪೃಥ್ವಿ ಶಾ ಬ್ಯಾಟಿಂಗ್‌ ಸಾಧಕರ ಅಗ್ರಸ್ಥಾನ ಅಲಂಕರಿಸಿದ್ದರು. ಈ ಅನುಭವದ ಹಿನ್ನೆಲೆಯಲ್ಲಿ ಅವರನ್ನು ವಿಶ್ವಕಪ್‌ ತಂಡಕ್ಕೆ ಆರಿಸಿರುವ ಸಾಧ್ಯತೆ ಇದೆ.

‘ಆರಂಭಕಾರನಾಗಿರುವುದರಿಂದ ತಂಡದ ಆಡಳಿತ ಮಂಡಳಿ ಅಗರ್ವಾಲ್ ಹೆಸರನ್ನು ಶಿಫಾರಸು ಮಾಡಿರಬೇಕು. ಅಕಸ್ಮಾತ್‌ ಮುಂದಿನ ಪಂದ್ಯಗಳಲ್ಲಿ ರಿಷಭ್‌ ಪಂತ್‌ ವಿಫ‌ಲರಾದರೆ ರಾಹುಲ್ ಅವರನ್ನು ಮತ್ತೆ 4ನೇ ಸ್ಥಾನಕ್ಕೆ ಇಳಿಸುವ ಉದ್ದೇಶವೂ ಇದೆ’ ಎಂದು ಮೂಲವೊಂದು ತಿಳಿಸಿದೆ.

ಈ ವೇಳೆ ಮೀಸಲು ಆಟಗಾರರ ಯಾದಿಯಲ್ಲಿರುವ ಅಂಬಾಟಿ ರಾಯುಡು ಅವರನ್ನು ಆಯ್ಕೆ ಮಾಡದಿದ್ದುದು ಕೂಡ ಟೀಕೆಗೆ ಕಾರಣವಾಗಿದೆ.

ವಿಜಯ್‌ ಶಂಕರ್‌ ವೈಫ‌ಲ್ಯ
ವಿಶ್ವಕಪ್‌ನಂಥ ಪ್ರತಿಷ್ಠಿತ ಕೂಟದಲ್ಲಿ ಅನನುಭವಿ ವಿಜಯ್‌ ಶಂಕರ್‌ ಅವರನ್ನು 4ನೇ ಕ್ರಮಾಂಕದಲ್ಲಿ ಆಡಿಸುವ ಭಾರತದ ಕ್ರಮದ ಬಗ್ಗೆ ಎಲ್ಲೆಡೆ ಟೀಕೆ ವ್ಯಕ್ತವಾಗಿತ್ತು. ಇಂಗ್ಲೆಂಡ್‌ ವಿರುದ್ಧ ಈ ಕಾರಣಕ್ಕಾಗಿಯೇ ಅವರನ್ನು ಕೈಬಿಡಲಾಗಿತ್ತೆಂದು ಭಾವಿಸ ಲಾಗಿತ್ತು. ‘ಇಂಜುರಿ’ ಕಾರಣ ನೀಡಲಾಗಿ ತ್ತಾದರೂ ಈ ಬಗ್ಗೆ ಅನುಮಾನಗಳಿದ್ದವು. ಆದರೀಗ ಎಲ್ಲವೂ ಸ್ಪಷ್ಟವಾಗಿದೆ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.