ಪಂತ್‌ ಇಂಗ್ಲೆಂಡ್‌ ಪಯಣ

ಧವನ್‌ ಗಾಯಾಳಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ

Team Udayavani, Jun 13, 2019, 5:46 AM IST

Rishabh-Pant

ಹೊಸದಿಲ್ಲಿ: ಯುವ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್‌ ಪಂತ್‌ ಇಂಗ್ಲೆಂಡಿಗೆ ಪಯ ಣಿಸಲಿದ್ದಾರೆ. ಆರಂಭಕಾರ ಶಿಖರ್‌ ಧವನ್‌ ಗಾಯಾಳಾದ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಪಂತ್‌ ಟೀಮ್‌ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಆದರೆ ಅವರು ಬದಲಿ ಆಟಗಾರನಾಗಿರುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

“ತಂಡದ ಆಡಳಿತ ಮಂಡಳಿಯ ಕೋರಿಕೆಯಂತೆ ಮುಂಜಾಗ್ರತಾ ಕ್ರಮವಾಗಿ ಪಂತ್‌ ಅವರನ್ನು ಇಂಗ್ಲೆಂಡಿಗೆ ಕಳುಹಿಸಿಕೊಡಲಾಗುವುದು. ಆದರೆ ಅವರು ಬದಲಿ ಆಟಗಾರನಾಗಿರುವುದಿಲ್ಲ’ ಎಂದು ಬಿಸಿಸಿಐ ಅಧಿಕಾರಿ ಯೊಬ್ಬರು ಹೇಳಿದ್ದಾರೆ.

ಐಸಿಸಿ ನಿಯಮ ಅಡ್ಡಿ
ಶಿಖರ್‌ ಧವನ್‌ ಅವರ ಚೇತರಿಕೆಯನ್ನು ಗಮನಿಸಿ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುವುದು ಬಿಸಿಸಿಐ ಯೋಜನೆ ಯಾಗಿದೆ. ಧವನ್‌ ಬೇಗನೇ ಗುಣಮುಖರಾಗುವುದಾದರೆ ಬದಲಿ ಆಟಗಾರನ ಅಗತ್ಯ ಕಂಡುಬಾರದು ಎಂಬುದು ಮಂಡಳಿ ಲೆಕ್ಕಾಚಾರ. ಒಂದು ವೇಳೆ ಪಂತ್‌ ಅಧಿಕೃತ “ಬದಲಿ ಕ್ರಿಕೆಟಿಗ’ನಾದರೆ, ಮುಂದೆ ಧವನ್‌ ಚೇತರಿಸಿಕೊಂಡರೂ ಐಸಿಸಿ ನಿಯಮದಂತೆ ವಿಶ್ವಕಪ್‌ ತಂಡವನ್ನು ಸೇರಿಕೊಳ್ಳಲಾರರು.

ಐಸಿಸಿಯ ಇನ್ನೊಂದು ನಿಯಮದ ಪ್ರಕಾರ ತಂಡದ ಆಟಗಾರರ ಸಂಖ್ಯೆ 15ರ ಗಡಿ ಮೀರುವಂತಿಲ್ಲ. 2015ರ ವಿಶ್ವಕಪ್‌ನಲ್ಲಿ ಧವಳ್‌ ಕುಲಕರ್ಣಿ ಅವರನ್ನು ಹೆಚ್ಚುವರಿ 16ನೇ ಸದಸ್ಯನಾಗಿ ಇರಿಸಿಕೊಂಡ ತಪ್ಪಿಗೆ ಬಿಸಿಸಿಐ 2.4 ಕೋಟಿ ರೂ. ದಂಡ ತೆರುವಂತಾಗಿತ್ತು. ಇಂಥ ತಪ್ಪು ಈ ಸಲ ಮರುಕಳಿಸಬಾರದೆಂಬ ಕಾರಣಕ್ಕೆ ಪಂತ್‌ ವಿಚಾರದಲ್ಲಿ ಬಿಸಿಸಿಐ ಮುನ್ನೆಚ್ಚರಿಕೆ ವಹಿಸಿದೆ.

21ರ ಹರೆಯದ ರಿಷಭ್‌ ಪಂತ್‌ ಕಳೆದ ಐಪಿಎಲ್‌ನಲ್ಲಿ ಕೆಲವು ಸ್ಫೋಟಕ ಇನ್ನಿಂಗ್ಸ್‌ ಆಡಿದ್ದರು.

ಡ್ರೆಸ್ಸಿಂಗ್‌ ರೂಮ್‌ ನಿಷೇಧ
ರಿಷಭ್‌ ಪಂತ್‌ ಪಾಕಿಸ್ಥಾನದೆ ದುರಿನ ರವಿವಾರದ ಪಂದ್ಯಕ್ಕೂ ಮುನ್ನ ಮ್ಯಾಂಚೆಸ್ಟರ್‌ಗೆ ಬರಲಿದ್ದಾರೆ. ಜತೆಗೆ ನೆಟ್‌ ಬೌಲರ್‌ ಖಲೀಲ್‌ ಅಹ್ಮದ್‌ ಕೂಡ ಇರಲಿದ್ದಾರೆ. ಪಂತ್‌ ತಂಡದ ಸದಸ್ಯನಲ್ಲದ ಕಾರಣ ಪಂದ್ಯದ ದಿನಗಳಂದು ಡ್ರೆಸ್ಸಿಂಗ್‌ ರೂಮ್‌ ಪ್ರವೇಶಿಸುವಂತಿಲ್ಲ. ಐಸಿಸಿ ಭ್ರಷ್ಟಾಚಾರ ನಿಗ್ರಹ ದಳದ ನಿಯಮದಂತೆ ನಿರ್ದಿಷ್ಟ ಕ್ರಿಕೆಟಿ ಗರಷ್ಟೇ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಉಳಿಯಬಹುದು ಹಾಗೂ ತಂಡದ ಬಸ್ಸಿನಲ್ಲಿ ಪ್ರಯಾಣಿಸಬಹುದು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.