20 ವರ್ಷಗಳ ಏಕದಿನ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ಮಲಿಕ್

ಅಂತಾರಾಷ್ಟ್ರೀಯ ಏಕದಿನಕ್ಕೆ ಶೋಯೇಬ್ ಮಲಿಕ್ ವಿದಾಯ

Team Udayavani, Jul 6, 2019, 11:42 AM IST

malik

ಲಾರ್ಡ್ಸ್: ಪಾಕಿಸ್ಥಾನದ ಹಿರಿಯ ಆಟಗಾರ ಶೋಯೆಬ್ ಮಲಿಕ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಸುದೀರ್ಫ 20 ವರ್ಷಗಳ ಕಾಲ ಪಾಕ್ ತಂಡದ ಪ್ರಮುಖ ಆಟಗಾರನಾಗಿ ಆಡಿದ್ದ ಮಲಿಕ್ ಇನ್ನು ಮಂದೆ ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಮುಂದುವರಿಯುವ ಇರಾದೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದ ನಂತರ ಮಲಿಕ್ ತನ್ನ ವಿದಾಯ ಘೋಷಣೆ ಮಾಡಿದರು. ಅದರೆ ಈ ಪಂದ್ಯದಲ್ಲಿ ಮಲಿಕ್ ಆಡುವ ಬಳಗದಲ್ಲಿ ಅವಕಾಶ ಪಡೆದಿರಲಿಲ್ಲ.

1999 ಅಕ್ಟೋಬರ್ 14ರಂದು ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ 17ರ ಹರೆಯದ ಮಲಿಕ್ ತನ್ನ 20 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನದಲ್ಲಿ ಒಟ್ಟು 287 ಏಕದಿನ ಪಂದ್ಯಗಳಲ್ಲಿ ಪಾಕಿಸ್ಥಾನದ ಜೆರ್ಸಿ ತೊಟ್ಟಿದ್ದಾರೆ. 34.55ರ ಸರಾಸರಿಯಲ್ಲಿ 7534 ರನ್ ಗಳಿಸಿರುವ ಮಲಿಕ್ ಹೆಸರಲ್ಲಿ 9 ಶತಕ ಮತ್ತು 44 ಅರ್ಧಶತಕಗಳಿವೆ. ಉತ್ತಮ ಆಫ್ ಸ್ಪಿನ್ನರ್ ಕೂಡಾ ಆಗಿದ್ದ ಮಲಿಕ್ 158 ವಿಕೆಟ್ ಕೂಡಾ ಪಡೆದಿದ್ದರು.

1982ರಲ್ಲಿ ಜನಿಸಿದ್ದ ಮಲಿಕ್ 1993ರಲ್ಲಿ ಇಮ್ರಾನ್ ಖಾನ್ ಕೋಚಿಂಗ್ ಅಕಾಡೆಮಿಗೆ ಸೇರಿ ಕ್ರಿಕೆಟ್ ನ ಎಬಿಸಿಡಿ ಕಲಿತರು. 1996ರಲ್ಲಿ ಪಾಕಿಸ್ಥಾನದ ಅಂಡರ್ 15 ತಂಡಕ್ಕೆ ಬೌಲರ್ ಆಗಿ ಆಯ್ಕೆಯಾಗಿದ್ದರು. 2007ರ ವಿಶ್ವಕಪ್ ಸೋಲಿನ ನಂತರ ಇಂಝಮಾಮ್ ಉಲ್ ಹಕ್ ನಾಯಕತ್ವ ತ್ಯಜಿಸಿದ ಬಳಿಕ ಮಲಿಕ್ ಪಾಕಿಸ್ಥಾನದ ನಾಯಕತ್ವ ವಹಿಸಿದರು. ಮಲಿಕ್ ಗೆ ಆಗ 25 ವರ್ಷ ವಯಸಾಗಿತ್ತಷ್ಟೇ. ತಂಡದೊಳಗಿನ ವೈಮನಸ್ಸಿನಿಂದ 2009ರಲ್ಲಿ ಮಲಿಕ್ ನಾಯಕತ್ವವನ್ನು ಯೂನಿಸ್ ಖಾನ್ ಗೆ ಬಿಟ್ಟುಕೊಡಬೇಕಾಯಿತು. 36 ಏಕದಿನ ಪಂದ್ಯಗಳಲ್ಲಿ ಪಾಕ್ ತಂಡವನ್ನು ಮುನ್ನಡೆಸಿದ್ದ ಶೋಯೆಬ್ 24 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಜಯ ಕೊಡಿಸಿದ್ದರು.

ಭಾರತೀಯ ಖ್ಯಾತ ಟೆನ್ನಿಸ್ ಪಟು ಸಾನಿಯಾ ಮಿರ್ಜಾ ಅವರನ್ನು 2010ರಲ್ಲಿ ಎಪ್ರಿಲ್ ನಲ್ಲಿ ವಿವಾಹವಾದ ಮಲಿಕ್ ಮದುವೆ ವಿಶ್ವಮಟ್ಟದಲ್ಲಿ ಸುದ್ದಿಯಾಗಿತ್ತು.

2019ರ ವಿಶ್ವಕಪ್ ನಲ್ಲಿ ಕೇವಲ ಮೂರು ಪಂದ್ಯಗಳನ್ನಾಡಿದ ಮಲಿಕ್ ಕಳಪೆ ಫಾರ್ಮ್ ನಿಂದಾಗಿ ಹೊರಗುಳಿಬೇಕಾಯಿತು. ವಿದಾಯದ ನಂತರ ಮಾತನಾಡಿದ ಮಲಿಕ್, “ನಾನು ವಿಶ್ವಕಪ್ ನ ಕೊನೆಯ ಪಂದ್ಯದಲ್ಲಿ ವಿದಾಯ ಘೋಷಿಸುವ ಬಗ್ಗೆ ವರ್ಷಗಳ ಹಿಂದೆಯೇ ಯೋಚಿಸಿದ್ದೆ. ನಾನಿನ್ನು ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಬಯಸುತ್ತೇನೆ. ಮತ್ತು ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಮುಂದುವರಿಯುತ್ತೇನೆ” ಎಂದರು.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.