ವಿಶ್ವಕಪ್‌ನಿಂದ ದ.ಆಫ್ರಿಕಾ ಔಟ್‌


Team Udayavani, Jun 24, 2019, 5:12 AM IST

AP6_23_2019_000127B

ಲಂಡನ್‌: ಏಳು ಪಂದ್ಯಗಳಲ್ಲಿ 5ನೇ ಸೋಲುಂಡ ದಕ್ಷಿಣ ಆಫ್ರಿಕಾ ವಿಶ್ವಕಪ್‌ನಿಂದ ಅಧಿಕೃತವಾಗಿ ಹೊರಬಿದ್ದಿದೆ. ರವಿವಾರದ ಲಾರ್ಡ್ಸ್‌ ಪಂದ್ಯದಲ್ಲಿ ಡು ಪ್ಲೆಸಿಸ್‌ ಪಡೆ ಪಾಕಿಸ್ಥಾನ ವಿರುದ್ಧ 49 ರನ್ನುಗಳಿಂದ ಮುಗ್ಗರಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಪಾಕಿಸ್ಥಾನ ಸ್ಫೋಟಕ ಆಟವಾಡಿ 7 ವಿಕೆಟಿಗೆ 308 ರನ್‌ ಗಳಿಸಿ ಸವಾಲೊಡ್ಡಿದರೆ, ದಕ್ಷಿಣ ಆಫ್ರಿಕಾ 9 ವಿಕೆಟಿಗೆ 259 ರನ್‌ ಹೊಡೆದು ಶರಣಾಯಿತು.

ಇದು ಪಾಕಿಸ್ಥಾನಕ್ಕೆ 6 ಪಂದ್ಯಗಳಲ್ಲಿ ಒಲಿದ ಕೇವಲ 2ನೇ ಜಯ. ಉಳಿದ ಮೂರೂ ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದರೆ, ಅಗ್ರಸ್ಥಾನದಲ್ಲಿರುವ 4 ತಂಡಗಳಲ್ಲಿ ಕೆಲವು ಸೋಲುತ್ತ ಹೋದರಷ್ಟೇ ಪಾಕಿಸ್ಥಾನಕ್ಕೆ ನಾಕೌಟ್‌ ಅವಕಾಶವೊಂದು ಎದುರಾದೀತು.

ಚೇಸಿಂಗ್‌ ವೇಳೆ ಹಾಶಿಮ್‌ ಆಮ್ಲ (2) ಅವರನ್ನು ಬೇಗನೇ ಕಳೆದುಕೊಂಡ ಆಫ್ರಿಕಾಕ್ಕೆ ಡಿ ಕಾಕ್‌ (47) ಮತ್ತು ಡು ಪ್ಲೆಸಿಸ್‌ (63) ಆಧಾರವಾದರು. ಈ ಜೋಡಿ ಬೇರ್ಪಟ್ಟೊಡನೆ ಪಾಕ್‌ ಬೌಲರ್‌ಗಳು ಮೇಲುಗೈ ಸಾಧಿಸಿದರು. ವಹಾಬ್‌ ರಿಯಾಜ್‌ ಮತ್ತು ಶಾದಾಬ್‌ ಖಾನ್‌ ತಲಾ 3 ವಿಕೆಟ್‌ ಹಾರಿಸಿದರು.

ಪಾಕಿಸ್ಥಾನ ಪರ ಗರಿಷ್ಠ ಮೊತ್ತ ಗಳಿಸಿದ ಬ್ಯಾಟ್ಸ್‌ಮನ್‌ ಹ್ಯಾರಿಸ್‌ ಸೊಹೈಲ್‌ 59 ಎಸೆತಗಳ‌ಲ್ಲಿ 89 ರನ್‌ ಸಿಡಿಸಿದರು. ಇದರಲ್ಲಿ 9 ಬೌಂಡರಿ, 3 ಸಿಕ್ಸರ್‌ಗಳಿದ್ದವು.
ಇದಕ್ಕೂ ಮುನ್ನ ಇಮಾಮ್‌ ಉಲ್‌ ಹಕ್‌, ಫ‌ಕಾರ್‌ ಜಮಾನ್‌ ಅತ್ಯುತ್ತಮವಾಗಿ ಆಡಿ ಮೊದಲ ವಿಕೆಟಿಗೆ 14.5 ಓವರ್‌ಗಳಿಂದ 81 ರನ್‌ ಪೇರಿಸಿ ಭದ್ರ ಬುನಾದಿ ನಿರ್ಮಿಸಿದರು. ಇಬ್ಬರ ಗಳಿಕೆಯೂ ತಲಾ 44 ರನ್‌. ಹಾಗೆಯೇ ವನ್‌ಡೌನ್‌ ಬ್ಯಾಟ್ಸ್‌ ಮನ್‌ ಬಾಬರ್‌ ಆಜಂ ಕೂಡ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ 80 ಎಸೆತಗಳಿಂದ 69 ರನ್‌ ಹೊಡೆದರು (7 ಬೌಂಡರಿ).

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.