ಕಳಪೆ ತೀರ್ಪು: ಹೋಲ್ಡಿಂಗ್‌ ತರಾಟೆ


Team Udayavani, Jun 14, 2019, 5:37 AM IST

West-Indies,-Michael-Holding,-I

ಲಂಡನ್‌: ಕಮೆಂಟರಿ ಹೇಳುವಾಗ ಅಂಪಾಯರ್‌ಗಳನ್ನು ಟೀಕಿಸಬಾರದು ಎಂದಿರುವ ಐಸಿಸಿಯನ್ನು ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಹಾಗೂ ಪ್ರಸ್ತುತ ಕಮೆಂಟೇಟರ್‌ ಆಗಿರುವ ಮೈಕೆಲ್‌ ಹೋಲ್ಡಿಂಗ್‌ ಇ-ಮೈಲ್‌ ಒಂದರಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ವೆಸ್ಟ್‌ ಇಂಡೀಸ್‌-ಆಸ್ಟ್ರೇಲಿಯ ಪಂದ್ಯದಲ್ಲಿ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಗೆರೆ ದಾಟಿದ್ದರೂ ಅಂಪಾಯರ್‌ ಅದನ್ನು ಗಮನಿಸದೆ ಮುಂದಿನ ಬಾಲ್‌ನಲ್ಲಿ ಕ್ರಿಸ್‌ ಗೇಲ್‌ಗೆ ಎಲ್‌ಬಿಡಬ್ಲ್ಯು ತೀರ್ಪು ನೀಡಿರುವ ಪ್ರಸಂಗವನ್ನು ಉಲ್ಲೇಖೀಸಿರುವ ಹೋಲ್ಡಿಂಗ್‌, “ನಿಜವಾಗಿ ಮೊದಲಿನ ಎಸೆತದಲ್ಲಿ ಬೌಲರ್‌ ಗೆರೆ ದಾಟಿ ರುವುದರಿಂದ ಅನಂತರದ ಎಸೆತ ಫ್ರೀ ಹಿಟ್‌ ಆಗಬೇಕಿತ್ತು. ಇದನ್ನು ನೋಡಿಯೂ ಕಣ್ಣು ಮುಚ್ಚಿ ಕುಳಿತುಕೊಳ್ಳಬೇಕೆ?’ ಎಂದು ಪ್ರಶ್ನಿಸಿದ್ದಾರೆ.

ಆಸ್ಟ್ರೇಲಿಯದವರು ಪದೇ ಪದೇ ಅಪೀಲು ಮಾಡಿ ಒತ್ತಡ ಹಾಕಿದಾಗ ಔಟ್‌ ನೀಡುವ ಅಂಪಾಯರ್‌ಗಳನ್ನೂ ಹೋಲ್ಡಿಂಗ್‌ ಟೀಕಿಸಿದ್ದಾರೆ.

ಐಸಿಸಿಯ ಪ್ರಸಾರ ಹಕ್ಕುಗಳ ಪಾಲುದಾರರಾಗಿರುವ ಹು ಬೆವನ್‌, ಕಮೆಂಟ್ರಿ ಹೇಳುವ ಸಂದರ್ಭದಲ್ಲಿ ಹೋಲ್ಡಿಂಗ್‌ ಅಂಪಾಯರ್‌ಗಳನ್ನು ಟೀಕಿಸಿರುವುದನ್ನು ಆಕ್ಷೇಪಿಸಿ ಇ-ಮೇಲ್‌ ರವಾನಿಸಿದ್ದರು.

ಕ್ರಿಕೆಟ್‌ ಘನತೆ ಕಾಪಾಡಿ…
ಇದಕ್ಕೆ ಪ್ರತಿಕ್ರಿಯಿಸಿದ ಹೋಲ್ಡಿಂಗ್‌, “ಈ ಅಂಪಾಯರ್‌ಗಳು ಒಂದು ವೇಳೆ ಫಿಫಾದಲ್ಲಿದ್ದಿದ್ದರೆ ಗಂಟುಮೂಟೆ ಕಟ್ಟಿಕೊಂಡು ಮನೆಗೆ ಹೋಗಬೇಕಿತ್ತು. ಅವರಿಗೆ ಇನ್ನೊಂದು ವಿಶ್ವಕಪ್‌ನಲ್ಲಿ ಭಾಗವಹಿಸುವ ಅವಕಾಶ ಸಿಗುತ್ತಿರಲಿಲ್ಲ. ಮಾಜಿ ಕ್ರಿಕೆಟಿಗನಾಗಿ ನನಗೆ ಅನಿಸುವುದೇನೆಂದರೆ, ಕ್ರಿಕೆಟಿನ ಘನತೆಯನ್ನು ಕಾಪಾಡಿಕೊಳ್ಳಬೇಕು. ನಿಮ್ಮ ಉದ್ದೇಶ ತಪ್ಪು ಮಾಡಿರುವ ಅಂಪಾಯರ್‌ಗಳನ್ನು ರಕ್ಷಿಸುವುದೇ?’ ಎಂದು ಖಾರವಾಗಿ ಕೇಳಿದ್ದಾರೆ.

ಆದರೆ ಈ ಚಕಮಕಿಯ ಬಳಿಕ ಐಸಿಸಿ ಮತ್ತು ಹೋಲ್ಡಿಂಗ್‌ ಇಬ್ಬರೂ ವಿವಾದ ಮುಕ್ತಾಯವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.