ವಿಶ್ವಕಪ್‌ ಪ್ರಶಸ್ತಿ ಯಾರಿಗೆ?

ಅದೃಷ್ಟದ ಕಿವೀಸ್‌; ಆತಿಥ್ಯದ ಇಂಗ್ಲೆಂಡ್‌

Team Udayavani, Jul 13, 2019, 5:56 AM IST

world-cup-cricket-2019

ಲಂಡನ್‌: ಬಹುತೇಕ ಯಾರೂ ನಿರೀಕ್ಷೆ ಮಾಡದ ಎರಡು ತಂಡಗಳು 2019ರ ವಿಶ್ವಕಪ್‌ ಕ್ರಿಕೆಟ್‌ ಕೂಟದ ಪ್ರಶಸ್ತಿ ಎತ್ತಲು ರವಿವಾರ ಇಲ್ಲಿನ ಐತಿಹಾಸಿಕ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಮುಖಾ ಮುಖೀಯಾಗುತ್ತಿವೆ.

ಅದೃಷ್ಟದ ಬಲದಿಂದ ಫೈನಲಿಗೇರಿದ ನ್ಯೂಜಿಲ್ಯಾಂಡ್‌ ಮತ್ತು ಆತಿಥ್ಯ ವಹಿಸಿಕೊಂಡ ಇಂಗ್ಲೆಂಡ್‌ ಪ್ರಶಸ್ತಿ ಗೆಲ್ಲಲು ಹೋರಾಡಲಿದೆ. ಸಾಮಾನ್ಯ ತಂಡವಾಗಿರುವ ನ್ಯೂಜಿಲ್ಯಾಂಡ್‌ ಸೆಮಿಫೈನಲ್‌ನಲ್ಲಿ ಬಲಿಷ್ಠ ಭಾರತವನ್ನು ಬಗ್ಗುಬಡಿದರೆ ಇಂಗ್ಲೆಂಡ್‌ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯವನ್ನು ಮಣಿಸಿ ಪ್ರಶಸ್ತಿ ಸುತ್ತಿಗೆ ಏರಿದೆ. ರವಿವಾರ ಯಾರೇ ಗೆದ್ದರೂ ಆ ತಂಡ ಚೊಚ್ಚಲ ಬಾರಿ ಪ್ರಶಸ್ತಿ ಗೆದ್ದ ಸಂಭ್ರಮ ಆಚರಿಸಲಿದೆ.

ಪ್ರಶಸ್ತಿ ಯಾರಿಗೆ
ಉಭಯ ತಂಡಗಳ ಬಲಾಬಲ ವನ್ನು ಗಮನಿಸಿದರೆ ಇಂಗ್ಲೆಂಡ್‌ ಬಲಿಷ್ಠವೆಂದು ಹೇಳಬಹುದು. ಆಸ್ಟ್ರೇಲಿಯ ವಿರುದ್ಧ ಆಡಿದಂತೆ ಫೈನಲ್‌ನಲ್ಲೂ ಆಡಿದರೆ ಇಂಗ್ಲೆಂಡ್‌ ಗೆಲ್ಲುವುದರಲ್ಲಿ ಅನುಮಾನವಿಲ್ಲ. ಬೌಲಿಂಗ್‌, ಬ್ಯಾಟಿಂಗ್‌ನಲ್ಲಿ ಅಸಾ ಮಾನ್ಯ ನಿರ್ವಹಣೆ ನೀಡಿದ ಆತಿ ಥೇಯ ಆಂಗ್ಲರು ಆಸೀಸನ್ನು ಬಗ್ಗು ಬಡಿದಿದ್ದರು. ಮಾತ್ರವಲ್ಲದೇ ಲೀಗ್‌ ಹಂತದಲ್ಲಿ ಇಂಗ್ಲೆಂಡ್‌ ಕಿವೀಸ‌ನ್ನು ಭಾರೀ ಅಂತರದಿಂದ ಉರುಳಿಸಿತ್ತು. ಇದೇ ವೇಳೆ ಅದೃ ಷ್ಟದ ಬಲದಿಂದ ಸೆಮಿಫೈನಲಿಗೇ ರಿದ್ದ ಕಿವೀಸ್‌ ಮಳೆ ಯಿಂದ ತೊಂದರೆಗೊ ಳಗಾದ ಪಂದ್ಯದಲ್ಲಿ ರನ್‌ ಮೆಷಿನ್‌ ಭಾರತದ ರನ್‌ ಓಟಕ್ಕೆ ಬ್ರೇಕ್‌ ನೀಡುವಲ್ಲಿ ಯಶಸ್ವಿಯಾಗಿ ಫೈನಲಿಗೆ ಏರಿತ್ತು.

ಹೀಗೊಂದು ಲೆಕ್ಕಾಚಾರ
1992ರಲ್ಲಿ ಅದೃಷ್ಟದ ಬಲದಿಂದ ಸೆಮಿಫೈನಲ್‌ ತಲುಪಿದ್ದ ಪಾಕಿಸ್ಥಾನ ಆಬಳಿಕ ಅಮೋಘ ನಿರ್ವಹಣೆ ನೀಡುತ್ತ ಪ್ರಶಸ್ತಿ ಗೆದ್ದು ಸಂಭ್ರಮಿಸಿತ್ತು. ಈ ಬಾರಿ ನ್ಯೂಜಿಲ್ಯಾಂಡ್‌ ಕೂಡ ಅದೃಷ್ಟದ ಬಲದಿಂದಲೇ ಸೆಮಿಫೈನಲಿಗೇರಿತ್ತು. ರನ್‌ಧಾರಣೆಯ ಆಧಾರದಲ್ಲಿ ನಾಕೌಟ್‌ ತಲುಪಿದೆ. ಫೈನಲ್‌ನಲ್ಲಿ ಇಂಗ್ಲೆಂಡ್‌ ಎದುರಾಳಿ ಸಿಕ್ಕಿದೆ.

ಇದೇ ವೇಳೆ ಆತಿಥ್ಯ ವಹಿಸಿದ ಇಂಗ್ಲೆಂಡಿಗೂ ಪ್ರಶಸ್ತಿ ಗೆಲ್ಲುವ ಅವಕಾಶವಿದೆ. ಕಳೆದ ಎರಡು ವಿಶ್ವಕಪ್‌ ವೇಳೆ ಆತಿಥ್ಯ ವಹಿಸಿದ ತಂಡವೇ ಪ್ರಶಸ್ತಿ ಗೆದ್ದಿದೆ. ಈ ಬಾರಿ ಇಂಗ್ಲೆಂಡ್‌ ಗೆದ್ದರೆ ಹ್ಯಾಟ್ರಿಕ್‌ ಸಾಧಿಸಲಿದೆ. 2011ರ ವಿಶ್ವಕಪ್‌ನ ಆತಿಥ್ಯ ವಹಿಸಿದ್ದ ಭಾರತ ಫೈನಲ್‌ನಲ್ಲಿ ಶ್ರೀಲಂಕಾವನ್ನು ಮಣಿಸಿ ಪ್ರಶಸ್ತಿ ಗೆದ್ದಿದೆ. 2015ರ ವಿಶ್ವಕಪ್‌ನ ಆತಿಥ್ಯ ಆಸ್ಟ್ರೇಲಿಯ ವಹಿಸಿತ್ತು. ಫೈನಲ್‌ನಲ್ಲಿ ನ್ಯೂಜಿಲ್ಯಾಂಡನ್ನು ಕೆಡಹಿ ಪ್ರಶಸ್ತಿ ಎತ್ತಿ ಹಿಡಿದಿತ್ತು. 2019ರ ವಿಶ್ವಕಪ್‌ನ ಆತಿಥ್ಯ ಇಂಗ್ಲೆಂಡ್‌ ವಹಿಸಿದೆ. ಫೈನಲ್‌ ರವಿವಾರ ನಡೆಯಲಿದ್ದು ಪ್ರಶಸ್ತಿ ಗೆಲ್ಲುವರ್ಯಾರು ಕಾದು ನೋಡುವ!

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.