ಆಫ್ರಿಕಾ,ಅಫ್ಘಾನ್‌ಗೆ ಗೆಲುವಿನ ಗುರಿ

ರಶೀದ್‌-ಪ್ಲೆಸಿಸ್‌ ಆಕರ್ಷಣೆ

Team Udayavani, Jun 15, 2019, 5:40 AM IST

de-cock

ಲಂಡನ್‌: ಈ ಬಾರಿಯ ವಿಶ್ವಕಪ್‌ನಲ್ಲಿ ತೀರ ಕಳಪೆ ಪ್ರದರ್ಶನ ತೋರಿದ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ಥಾನ ಶನಿವಾರ ಕಾರ್ಡಿಫ್ನಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ.

ಅಫ್ಘಾನಿಸ್ಥಾನ ಆಡಿದ 3 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 4 ಪಂದ್ಯಗಳಲ್ಲಿ 3 ಪಂದ್ಯ ಸೋತು ಒಂದು ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಕೇವಲ 1 ಅಂಕ ಸಂಪಾದಿಸಿದೆ. ಕೊನೆಯ ಪಕ್ಷ ಈ ಪಂದ್ಯವನ್ನಾದರೂ ಗೆದ್ದು ಗೆಲುವಿನ ಹಳಿ ಏರಲು ದಕ್ಷಿಣ ಆಫ್ರಿಕಾ ಎದುರು ನೋಡುತ್ತಿದೆ.
ಮುಂದಿನ ಹಂತಕ್ಕೇರಲು ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಇಲ್ಲಿ ಗೆಲುವಿನ ಖಾತೆ ತೆರೆದರೆ ಮಾತ್ರ ಮುನ್ನಡೆ ಯುವ ಅವಕಾಶ ಜೀವಂತವಾಗಿರಿಸಲು ಸಾಧ್ಯ. ಉಭಯ ತಂಡಗಳ ಬಲಾಬಲವನ್ನು ಗಮನಿಸಿದರೆ ಬಲಿಷ್ಠ ತಂಡವಾಗಿರುವ ದ. ಆಫ್ರಿಕಾ ಗೆಲ್ಲುವ ಫೇವರಿಟ್‌ ತಂಡವೆನಿಸಿದೆ.

ದ. ಆಫ್ರಿಕಾ ಕೈ ಹಿಡಿಯದ ಲಕ್‌
ದಕ್ಷಿಣ ಆಫ್ರಿಕಾ ತಂಡ ಹೆಚ್ಚು ಬಲಿಷ್ಠವಾಗಿದ್ದರೂ ಏನನ್ನೂ ಸಾಧಿಸದೇ ಹೋದ ತಂಡವಾಗಿ ಈ ಬಾರಿಯ ವಿಶ್ವಕಪ್‌ ಕೂಟದಲ್ಲಿ ಗುರುತಿಸಿಕೊಂಡಿದೆ. ತಂಡದ ಯಾವುದೇ ಬ್ಯಾಟ್ಸ್‌ ಮನ್‌ ಮಿಂಚುತ್ತಿಲ್ಲ ಎಂಬುದೇ ಅಚ್ಚರಿ. ಡಿ ಕಾಕ್‌, ಡು ಪ್ಲೆಸಿಸ್‌, ಆಮ್ಲ, ಡುಸೆನ್‌ ಅವರೆಲ್ಲ ಸಿಡಿದು ನಿಂತರಷ್ಟೇ ಆಫ್ರಿಕಾದ ಮೇಲೆ ನಂಬಿಕೆ ಇಡಬಹುದು. ಇನ್ನೂ ಬೌಲಿಂಗ್‌ ವಿಭಾಗದಲ್ಲಿ ಇಮ್ರಾನ್‌ ತಾಹಿರ್‌, ರಬಾಡ ಘಾತಕ ಬೌಲಿಂಗ್‌ ದಾಳಿ ನಡೆಸುತ್ತಿಲ್ಲ. ಡೇಲ್‌ ಸ್ಟೇನ್‌ ಗಾಯಾಳಾಗಿ ಹೊರಬಿದ್ದದ್ದು, ಲುಂಗಿ ಎನ್‌ಗಿಡಿ ಇನ್ನೂ ಚೇತರಿಸದಿರುವುದು ಬೌಲಿಂಗ್‌ ವಿಭಾಗವನ್ನು ದುರ್ಬಲಗೊಳಿಸಿದೆ ಎನ್ನಬಹುದು. ಇದನ್ನೆಲ್ಲ ಮರೆತು ಮತ್ತೆ ಗೆಲುವಿನ ಹಾದಿ ಹಿಡಿಯಲು ಪ್ಲೆಸಿಸ್‌ ಪಡೆ ಸಂಪೂರ್ಣ ಯೋಜನೆಯೊಂದಿಗೆ ಮೈದಾನಕ್ಕಿಳಿಯಬೇಕಾಗಿದೆ.

ಅಫ್ಘಾನ್‌ಗೆ ರಶೀದ್‌- ನಬಿ ಬಲ
ಬ್ಯಾಟಿಂಗ್‌ ಲೈನ್‌ಅಪ್‌ ಕೈಕೊಡುತ್ತಿರುವುದು ಅಫ್ಘಾನಿಸ್ಥಾನಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. ಅಗ್ರ ಕ್ರಮಾಂಕದ ಆಟಗಾರರು ಇನ್ನೂ ಬ್ಯಾಟಿಂಗ್‌ ಜೋಶ್‌ ತೋರುವಲ್ಲಿ ವಿಫ‌ಲವಾಗಿದ್ದಾರೆ. ಈ ಪಂದ್ಯದಲ್ಲಾದರೂ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದೇ ಆದರೆ ತಂಡ ಬೃಹತ್‌ ರನ್‌ ಪೇರಿಸುವಲ್ಲಿ ಅನುಮಾನವಿಲ್ಲ .

ಬೌಲಿಂಗ್‌ನಲ್ಲಿ ಸ್ಪಿನ್‌ ವಿಭಾಗ ಹೆಚ್ಚು ಘಾತಕ. ರಶೀದ್‌-ನಬಿ ಜೋಡಿಯನ್ನು ನಿಭಾಯಿಸುವುದು ಸುಲಭವಲ್ಲ. ಆದರೆ ವೇಗದ ಬೌಲಿಂಗ್‌ ಸಾಧಾರಣ ಮಟ್ಟದಲ್ಲಿದೆ. ಒಟ್ಟಾರೆಯಾಗಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ತೋರಿದ್ದೇ ಆದಲ್ಲಿ ಅಫ್ಘಾನ್‌ ಮೇಲುಗೈ ಸಾಧಿಸುವುದರಲ್ಲಿ ಅನುಮಾನವಿಲ್ಲ ಎನ್ನಬಹುದು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.