ವಿಂಡೀಸ್‌-ಕಿವೀಸ್‌ ಕಾಳಗ

ಅಜೇಯ ಓಟದ ಯೋಜನೆಯಲ್ಲಿ ನ್ಯೂಜಿಲ್ಯಾಂಡ್‌ ; ಗೆಲುವಿನ ಹಳಿ ಏರಲೇಬೇಕಿರುವ ವೆಸ್ಟ್‌ ಇಂಡೀಸ್‌

Team Udayavani, Jun 22, 2019, 4:55 AM IST

WEST-INDIES

ಮ್ಯಾಂಚೆಸ್ಟರ್‌: ದಕ್ಷಿಣ ಆಫ್ರಿಕಾವನ್ನು ಕೆಡವಿದ ಖುಷಿಯಲ್ಲಿರುವ ನ್ಯೂಜಿಲ್ಯಾಂಡ್‌ ಮತ್ತು ಅಸ್ಥಿರ ವೆಸ್ಟ್‌ ಇಂಡೀಸ್‌ ಶನಿವಾರದ ಹಗಲು-ರಾತ್ರಿ ವಿಶ್ವಕಪ್‌ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ.

ವಿಶ್ವಕಪ್‌ ಕೂಟದ ಅಜೇಯ ತಂಡವಾಗಿ ಗುರುತಿಸಿ ಕೊಂಡಿರುವ ನ್ಯೂಜಿಲ್ಯಾಂಡ್‌ ಈ ಪಂದ್ಯದಲ್ಲೂ ಗೆಲುವಿನ ನಾಗಾಲೋಟ ಮುಂದುವರಿಸುವ ಯೋಜನೆಯಲ್ಲಿದೆ. ಇನ್ನೊಂದೆಡೆ ವೆಸ್ಟ್‌ ಇಂಡೀಸ್‌ ಪಾಲಿಗೆ ಇದು ಮಹತ್ವದ ಪಂದ್ಯವಾಗಿದ್ದು, ಗೆಲ್ಲದಿದ್ದರೆ ಉಳಿಗಾಲವಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಕಿವೀಸ್‌ ಸೈಲೆಂಟ್‌ ಕಿಲ್ಲರ್‌
“ಸೈಲೆಂಟ್‌ ಕಿಲ್ಲರ್‌’ ಆಗಿ ಗುರುತಿಸಿಕೊಂಡಿರುವ ನ್ಯೂಜಿ ಲ್ಯಾಂಡ್‌ ಈ ಕೂಟದಲ್ಲಿ ಶಿಸ್ತಿನ ಪ್ರದರ್ಶನ ಕಾಯ್ದುಕೊಂಡು ಬಂದಿದೆ. ಸದ್ಯದ ಚಿಂತೆಯೆಂದರೆ ಆರಂಭಿಕರ ಫಾರ್ಮ್ನದ್ದು. ಕಾಲಿನ್‌ ಮುನ್ರೊ, ಮಾರ್ಟಿನ್‌ ಗಪ್ಟಿಲ್‌ ಲಯದಲ್ಲಿಲ್ಲ. ಇವರು ಬಿರುಸಿನ ಆಟಕ್ಕಿಳಿದರೆ ಕಿವೀಸ್‌ ಮತ್ತಷ್ಟು ಅಪಾಯಕಾರಿ ಎನಿಸಲಿದೆ.

ನಾಯಕ ಕೇನ್‌ ವಿಲಿಯಮ್ಸನ್‌ ದಕ್ಷಿಣ ಆಫ್ರಿಕಾ ವಿರುದ್ಧ ಅಮೋಘ ಶತಕ ಬಾರಿಸಿ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದಾರೆ. ಟೇಲರ್‌, ಗ್ರ್ಯಾಂಡ್‌ಹೋಮ್‌ ಮತ್ತಿಬ್ಬರು ಅಪಾಯಕಾರಿ ಬ್ಯಾಟ್ಸ್‌ಮನ್‌ಗಳು. ಬೌಲ್ಟ್, ಸ್ಯಾಂಟ್ನರ್‌, ಹೆನ್ರಿ, ಫ‌ರ್ಗ್ಯುಸನ್‌, ನೀಶಮ್‌ ಅವರಿಂದ ಕಿವೀಸ್‌ ಬೌಲಿಂಗ್‌ ದಾಳಿ ಹೆಚ್ಚು ಘಾತಕವಾಗಿ ಪರಿಣಮಿಸುವುದರಲ್ಲಿ ಅನುಮಾನವಿಲ್ಲ.

ವಿಂಡೀಸ್‌ಗೆ ಸ್ಥಿರತೆಯ ಕೊರತೆ
ವೆಸ್ಟ್‌ ಇಂಡೀಸ್‌ ಸಶಕ್ತ ತಂಡವಾದರೂ ಸ್ಥಿರತೆಯ ಕೊರತೆ ಕಾಡುತ್ತಿದೆ. ಬಾಂಗ್ಲಾ ವಿರುದ್ಧ ಮುನ್ನೂರರ ಗಡಿ ದಾಟಿಯೂ ಸೋತದ್ದು ಇದಕ್ಕೊಂದು ಉತ್ತಮ ನಿದರ್ಶನ. ಕ್ರಿಸ್‌ ಗೇಲ್‌ ಬ್ಯಾಟಿಂಗ್‌ ಮರೆತವರಂತೆ ಆಡುತ್ತಿದ್ದಾರೆ. ಐಪಿಎಲ್‌ನಲ್ಲಿ ಮಿಂಚಿದ ಆ್ಯಂಡ್ರೆ ರಸೆಲ್‌ ಕೂಡ ಹೊಡಿಬಡಿ ಆಟ ಆಡುತ್ತಿಲ್ಲ. ಹೋಪ್‌, ಹೆಟ್‌ಮೈರ್‌, ಹೋಲ್ಡರ್‌, ಬ್ರಾತ್‌ವೇಟ್‌ ಸಿಡಿದರೆ ತಂಡ ಬೃಹತ್‌ ಸ್ಕೋರ್‌ ದಾಖಲಿಸಬಹುದು. ಆದರೆ ಬೌಲಿಂಗ್‌ ಮೇಲೆ ಇದೇ ಭರವಸೆ ಇಡಲಾಗದು.

ಸಂಭಾವ್ಯ ತಂಡಗಳು
ನ್ಯೂಜಿಲ್ಯಾಂಡ್‌: ಮಾರ್ಟಿನ್‌ ಗಪ್ಟಿಲ್‌, ಹೆನ್ರಿ ನಿಕೋಲ್ಸ್‌/ ಕಾಲಿನ್‌ ಮುನ್ರೊ, ಕೇನ್‌ ವಿಲಿಯಮ್ಸನ್‌ (ನಾಯಕ), ರಾಸ್‌ ಟೇಲರ್‌, ಟಾಮ್‌ ಬ್ಲಿಂಡೆಲ್‌, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಜೇಮ್ಸ್‌ ನೀಶಮ್‌, ಮಿಚೆಲ್‌ ಸ್ಯಾಂಟ್ನರ್‌, ಟ್ರೆಂಟ್‌ ಬೌಲ್ಟ್, ಟಿಮ್‌ ಸೌಥಿ, ಐಶ್‌ ಸೋಧಿ.

ವೆಸ್ಟ್‌ ಇಂಡೀಸ್‌: ಕ್ರಿಸ್‌ ಗೇಲ್‌, ಎವಿನ್‌ ಲೆವಿಸ್‌, ಶೈ ಹೋಪ್‌, ನಿಕೋಲಸ್‌ ಪೂರನ್‌, ಶಿಮ್ರನ್‌ ಹೆಟ್‌ಮೈರ್‌, ಆ್ಯಂಡ್ರೆ ರಸೆಲ್‌, ಜಾಸನ್‌ ಹೋಲ್ಡರ್‌ (ನಾಯಕ), ಡ್ಯಾರನ್‌ ಬ್ರಾವೊ, ಒಶೇನ್‌ ಥಾಮಸ್‌, ಶೆಲ್ಡನ್‌ ಕಾಟ್ರೆಲ್‌, ಶಾನನ್‌ ಗ್ಯಾಬ್ರಿಯಲ್‌/ ಕಾರ್ಲೊಸ್‌ ಬ್ರಾತ್‌ವೇಟ್‌.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.