ವಿಶ್ವಕಪ್‌ ಸಾಧನೆ


Team Udayavani, Jul 14, 2019, 5:57 AM IST

W

ಲಂಡನ್‌: ಇಂಗ್ಲೆಂಡ್‌ನ‌ಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯು ಮೇ 30ರಂದು ಲೀಗ್‌ ಹಂತದ ಪಂದ್ಯಗಳು ಆರಂಭವಾಗಿ ಇದೀಗ ಪ್ರಶಸ್ತಿ ಸುತ್ತಿನ ಹಂತಕ್ಕೆ ಬಂದು ನಿಂತಿದೆ. ವಿಶ್ವಕಪ್‌ ಕೂಟದಲ್ಲಿ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಮುಖಾಮುಖೀಯಾಗುತ್ತಿರುವ ನ್ಯೂಜಿಲ್ಯಾಂಡ್‌ ಮತ್ತು ಇಂಗ್ಲೆಂಡ್‌ ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ಮೊದಲ ವಿಶ್ವಕಪ್‌ ಕಿರೀಟಕ್ಕಾಗಿ ಸೆಣೆಸಾಟ ನಡೆಸಲಿದೆ. ಇಲ್ಲಿ ಯಾರೇ ಗೆದ್ದು ಬಂದರೂ ಮೊದಲ ಬಾರಿಗೆ ವಿಶ್ವಚಾಂಪಿಯನ್‌ ಆಗಿ ಮೂಡಿಬರಲಿದ್ದಾರೆ.

ಇಂಗ್ಲೆಂಡ್‌ಗೆ ನಾಲ್ಕನೇ ಫೈನಲ್‌
ಕ್ರಿಕೆಟ್‌ ಜನಕರೆಂಬ ಖ್ಯಾತಿ ಪಡೆದ ಆಂಗ್ಲರಿಗೆ ಇದು 4ನೇ ವಿಶ್ವಕಪ್‌ ಫೈನಲ್‌. ಆದರೆ ಈ ಹಿಂದಿನ ಮೂರು ವಿಶ್ವಕಪ್‌ (1979, 1987, 1992) ನ ಫೈನಲ್‌ನಲ್ಲಿÉ ಸೋತು ಕಪ್‌ ಗೆಲ್ಲುವ ಅವಕಾಶದಿಂದ ಇಂಗ್ಲೆಂಡ್‌ ವಂಚಿತವಾಗಿತ್ತು. ಆದರೆ ಈ ಬಾರಿ ಹೇಗಾದರೂ ಕಪ್‌ಗೆ ಮುತ್ತಿಡಲು ಮಾರ್ಗನ್‌ ಪಡೆ ಪಣ ತೊಟ್ಟಿದೆ.

ನ್ಯೂಜಿಲ್ಯಾಂಡ್‌ಗೆ 2ನೇ ಫೈನಲ್‌
ಕಿವೀಸ್‌ಗೆ ಇದು ಸತತ 2ನೇ ವಿಶ್ವಕಪ್‌ ಫೈನಲ್‌. 2015ರ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯ ವಿರುದ್ಧ ಸೋತು ಕಪ್‌ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. ಆದರೆ ಈ ಬಾರಿ ಅದೃಷ್ಟದ ಬಲದಿಂದ ಫೈನಲ್‌ಗೆ ತಲುಪಿದ ನ್ಯೂಜಿಲ್ಯಾಂಡ್‌ ಹಿಂದಿನ ತಪ್ಪನ್ನು ಪುನರಾವರ್ತಿಸದೆ ಕಪ್‌ ಗೆಲ್ಲುವ ಯೋಜನೆ ಹಾಕಿಕೊಂಡಿದೆ.

ಪ್ರಮುಖ ಆಟಗಾರರ ಪೈಪೋಟಿ
ಜಾಸನ್‌ ರಾಯ್‌- ಮಾರ್ಟಿನ್‌ ಗಪ್ಟಿಲ್‌
ಇಂಗ್ಲೆಂಡ್‌ ತಂಡದ ಸ್ಟಾರ್‌ ಆಟಗಾರರಾಗಿರುವ ಜಾಸನ್‌ ರಾಯ್‌ ಕೂಟದ ಎಲ್ಲ ಪಂದ್ಯಗಳಲ್ಲೂ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿ ಎದುರಾಳಿ ತಂಡಕ್ಕೆ ನಡುಕ ಹುಟ್ಟಿಸಿದ್ದಾರೆ. 2015ರ ವಿಶ್ವಕಪ್‌ನಲ್ಲಿ ಅತ್ಯಧಿಕ ರನ್‌ ಗಳಿಸಿದ್ದ ನ್ಯೂಜಿಲ್ಯಾಂಡಿನ ಆರಂಭಕಾರ ಮಾರ್ಟಿನ್‌ ಗಪ್ಟಿಲ್‌ ಈ ಬಾರಿ ವೈಫ‌ಲ್ಯ ಅನುಭವಿಸಿದ್ದಾರೆ. ಆಡಿದ ಪ್ರತಿ ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿದ್ದರಿಂದ ಅವರ ಮೇಲಿನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಆದರೆ ಇದುವರೆಗೂ ಸ್ಫೋಟಕ ಬ್ಯಾಟಿಂಗ್‌ ನಡೆಸದ ಗಪ್ಟಿಲ್‌ ಫೈನಲ್‌ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ ನಡೆಸಿದಲ್ಲಿ ಪಂದ್ಯದ ಗತಿಯೇ ಬದಲಾಗುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ರಾಯ್‌ ಮತ್ತು ಗಪ್ಟಿಲ್‌ ಅವರ ಬ್ಯಾಟಿಂಗ್‌ ಪಂದ್ಯದ ಪ್ರಮುಖ ಆಕರ್ಷಣೆಯಾಗಿದೆ.

ಮ್ಯಾಟ್‌ ಹೆನ್ರಿ- ಕ್ರಿಸ್‌ ವೋಕ್ಸ್‌
ಭಾರತ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಘಾತಕ ಬೌಲಿಂಗ್‌ ನಡೆಸಿದ ಮ್ಯಾಟ್‌ ಹೆನ್ರಿ ಮತ್ತು ಆಸ್ಟ್ರೇಲಿಯ ವಿರುದ್ಧದ 2ನೇ ಸೆಮಿಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಕ್ರಿಸ್‌ ವೋಕ್ಸ್‌ ಫೈನಲ್‌ ಪಂದ್ಯದ ಪ್ರಮುಖ ಬೌಲಿಂಗ್‌ ಆಕರ್ಷಣೆಯಾಗಿದ್ದಾರೆ. ಫೈನಲ್‌ನಲ್ಲಿಯೂ ಇವರಿಂದ ಘಾತಕ ಸ್ಪೆಲ್‌ ನಡೆಯುವುದೇ ಎನ್ನುವುದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.