World Cup; ಅಜೇಯ ಭಾರತಕ್ಕೆ ಇಂದು ಲಂಕಾ ಸವಾಲು


Team Udayavani, Nov 2, 2023, 6:00 AM IST

1-sssa-sdsa

ಮುಂಬಯಿ: ಹನ್ನೆರಡು ವರ್ಷಗಳ ಹಿಂದೆ ಶ್ರೀಲಂಕಾವನ್ನು ಸದೆಬಡಿದು 2011ರ ಎಪ್ರಿಲ್‌ನಲ್ಲಿ ವಿಶ್ವ ಚಾಂಪಿಯನ್‌ ಆಗಿದ್ದ ಭಾರತ ತಂಡವು ಇದೀಗ ಇನ್ನೊಂದು ವಿಶ್ವಕಪ್‌ ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಲು ಸಜ್ಜಾಗಿದೆ. ಪ್ರಚಂಡ ಫಾರ್ಮ್ ಮತ್ತು ಆಡಿದ ಎಲ್ಲ ಪಂದ್ಯಗಳಲ್ಲಿ ಗೆದ್ದು ಸೆಮಿಫೈನಲ್‌ ಪ್ರವೇಶ ಖಚಿತ ಪಡಿಸಿರುವ ಭಾರತ ತಂಡವು ಗುರು ವಾರ ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾವನ್ನು ಎದುರಿಸಲಿದೆ.

2011ರ ವಿಶ್ವಕಪ್‌ ಫೈನಲ್‌ ಎರಡು ಬಲಿಷ್ಠ ತಂಡಗಳ ನಡುವಿನ ಹೋರಾಟವಾಗಿತ್ತು. ಆದರೆ ಈ ಬಾರಿ ಶ್ರೀಲಂಕಾ ಅಷ್ಟೊಂದು ಬಲಿಷ್ಠವಾಗಿಲ್ಲ. ಕೇವಲ ಎರಡು ಪಂದ್ಯಗಳಲ್ಲಿ ಗೆದ್ದಿ ರುವ ಶ್ರೀಲಂಕಾ ತಂಡ ಸಾಧಾರಣ ತಂಡವಾಗಿದ್ದು ಭಾರತಕ್ಕೆ ಯಾವ ರೀತಿ ತಿರುಗೇಟು ನೀಡಬಹುದು ಎಂಬು ದನ್ನು ನೋಡಬೇಕಾಗಿದೆ. ಆದರೆ ಭಾರತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಅದ್ಭುತ ನಿರ್ವಹಣೆ ನೀಡುತ್ತ ಬಂದಿದ್ದು ಗೆಲುವಿನ ಹುಮ್ಮಸ್ಸಿನಲ್ಲಿದೆ.

ವಿಶ್ವಕಪ್‌ನಲ್ಲಿ ಆಡಿದ ಆರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿರುವ ಭಾರತವು 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯ ವಿರುದ್ಧ ಒಂದು ಹಂತ ದಲ್ಲಿ ಎರಡು ರನ್ನಿಗೆ 3 ವಿಕೆಟ್‌ ಕಳೆದು ಕೊಂಡು ಶೋಚನೀಯ ಸ್ಥಿತಿಗೆ ತಲು ಪಿದ್ದರೂ ಅದ್ಭುತ ರೀತಿಯಲ್ಲಿ ಆಡಿ ಗೆಲುವು ದಾಖಲಿಸಿದ್ದ ಭಾರತ ತನ್ನ ಬ್ಯಾಟಿಂಗ್‌ ಆಳವನ್ನು ತೋರಿಸಿ ಕೊಟ್ಟಿದೆ. ಇಂಗ್ಲೆಂಡ್‌ ವಿರುದ್ಧ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾಗಿ 229 ರನ್‌ ಗಳಿಸಿದ್ದರೂ ಅದ್ಭುತ ಬೌಲಿಂಗ್‌ ವ್ಯೂಹ ಸಂಘಟಿಸಿ ವಿಶ್ವ ಚಾಂಪಿಯನ್‌ ತಂಡವನ್ನು ಕಟ್ಟಿ ಹಾಕಿರುವುದು ಭಾರತದ ಪರಾಕ್ರಮಕ್ಕೆ ಸಾಕ್ಷಿಯಾಗಿದೆ.

ಹಾರ್ದಿಕ್‌ ಪಾಂಡ್ಯ ಅವರ ಅನುಪ ಸ್ಥಿತಿ ಯಲ್ಲಿಯೂ ಭಾರತ ಉತ್ಕೃಷ್ಟ ನಿರ್ವಹಣೆ ನೀಡುತ್ತ ಬಂದಿದೆ. ಪಾಂಡ್ಯ ಬಹುತೇಕ ಲೀಗ್‌ನ ಯಾವುದೇ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ತಂಡದ ಬೌಲರ್‌ಗಳಾದ ಶಮಿ, ಬುಮ್ರಾ, ಜಡೇಜ ಮುಂತಾ ದವರು ಪರಿಣಾಮಕಾರಿ ದಾಳಿ ಸಂಘಟಿಸಿದ್ದರಿಂದ ಭಾರತ ಯಾವುದೇ ಚಿಂತೆಯಿಲ್ಲದೆ ಆಡುತ್ತಿದೆ.

ವಿಶ್ವಕಪ್‌ಗೆ ಬರುವ ಮೊದಲು ಸ್ಥಿರ ನಿರ್ವಹಣೆ ನೀಡುತ್ತ ಬಂದಿದ್ದ ಶುಭ್‌ಮನ್‌ ಗಿಲ್‌ ಮತ್ತು ಶ್ರೇಯಸ್‌ ಅಯ್ಯರ್‌ ಈ ಕೂಟದಲ್ಲಿ ಗಮನಾರ್ಹ ನಿರ್ವಹಣೆ ನೀಡಿಲ್ಲ. ಆರಂಭದ ಎರಡು ಪಂದ್ಯಗಳಲ್ಲಿ ಆಡದಿದ್ದ ಗಿಲ್‌ ಒಂದು ಅರ್ಧಶತಕ ಮಾತ್ರ ಹೊಡೆದಿದ್ದಾರೆ. ಅಯ್ಯರ್‌ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಹೊಡೆದಿದ್ದಾರೆ.

ರೋಹಿತ್‌ ಅಮೋಘ ಆಟ
ಈ ವಿಶ್ವಕಪ್‌ನಲ್ಲಿ ನಾಯಕ ರೋಹಿತ್‌ ಶರ್ಮ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ. ಶತಕ ಮತ್ತು ಎರಡು ಅರ್ಧಶತಕ ಹೊಡೆ ದಿರುವ ಅವರು 398 ರನ್ನು ಗಳೊಂದಿಗೆ ತಂಡದ ಗರಿಷ್ಠ ಸ್ಕೋರರ್‌ ಎನಿಸಿಕೊಂಡಿದ್ದಾರೆ. ಅವರು ತವರಿನ ಅಭಿಮಾನಿಗಳೆದುರು ಮತೊ¾ಮ್ಮೆ ಪ್ರಚಂಡ ಪ್ರದರ್ಶನ ನೀಡುವ ಉತ್ಸಾಹ ದಲ್ಲಿದ್ದಾರೆ. ಅವರೊಂದಿಗೆ ಸ್ಥಳೀಯ ಪ್ರತಿಭೆಗಳಾದ ಸೂರ್ಯಕುಮಾರ್‌ ಯಾದವ್‌, ಶಾದೂìಲ್‌ ಠಾಕೂರ್‌ ಆಡುವ ಸಾಧ್ಯತೆಯಿದೆ.

ಶ್ರೀಲಂಕಾ ನೀರಸ ನಿರ್ವಹಣೆ
ಈ ವಿಶ್ವಕಪ್‌ನಲ್ಲಿ ಶ್ರೀಲಂಕಾದ ನಿರ್ವಹಣೆ ನೀರಸವಾಗಿದೆ. ಗಾಯದ ಸಮಸ್ಯೆ ಮತ್ತು ಪ್ರಮುಖ ಆಟಗಾರರು ಲಭ್ಯವಿಲ್ಲದ ಕಾರಣ ತಂಡ ಶ್ರೇಷ್ಠ ನಿರ್ವಹಣೆ ನೀಡಲು ಒದ್ದಾಡುತ್ತಿದೆ. ತಂಡದ ಸದೀರ ಸಮರವಿಕ್ರಮ ಉತ್ತಮ ಫಾರ್ಮ್ ನಲ್ಲಿದ್ದು ಆಡಿದ ಆರು ಪಂದ್ಯಗಳಿಂದ 331 ರನ್‌ ಗಳಿಸಿದ್ದಾರೆ. ಒಂದು ಶತಕ ಹೊಡೆದಿದ್ದಾರೆ. ಪಥುಮ್‌ ನಿಸ್ಸಂಕ ಕೂಡ ಉತ್ತಮ ಫಾರ್ಮ್
ನಲ್ಲಿದ್ದು ಗಿಲ್‌ ಬಳಿಕ ವರ್ಷವೊಂದರಲ್ಲಿ ಸಾವಿರ ರನ್‌ ಪೂರ್ತಿಗೊಳಿಸಿದ ಇನ್ನೋರ್ವ ಆಟಗಾರ ಎಂದೆನಿಸಿಕೊಂಡಿ ದ್ದಾರೆ. ತಂಡದ ಬೌಲಿಂಗ್‌ ಅಷ್ಟೊಂದು ತೀಕ್ಷ್ಣವಾಗಿಲ್ಲ.

ವಿಶ್ವಕಪ್‌ ಮುಖಾಮುಖಿ
 ಪಂದ್ಯಗಳು: 09
 ಭಾರತ ಜಯ: 04
 ಶ್ರೀಲಂಕಾ ಜಯ: 04
 ಫ‌ಲಿತಾಂಶ ಇಲ್ಲ : 01
2019ರ ವಿಶ್ವಕಪ್‌ ಫ‌ಲಿತಾಂಶ
ಭಾರತಕ್ಕೆ 7 ವಿಕೆಟ್‌ ಜಯ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.